This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics News

ಗೋಹತ್ಯೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ ಜಾರಿಗೊಳಿಸಲು ಸರಕಾರ ಬದ್ದ

ಪಶು ಸಂಚಾರಿ ಅಂಬುಲೆನ್ಸ್ ಎಲ್ಲ ಜಿಲ್ಲೆಗಳಿಗೂ ವಿಸ್ತರಣೆ

ನಿಮ್ಮ ಸುದ್ದಿ ಬಾಗಲಕೋಟೆ

ಸಕಾಲದಲ್ಲಿ ರೈತರ ಜಾನುವಾರುಗಳ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಈಗಾಗಲೇ ರಾಜ್ಯದ ೧೬ ಜಿಲ್ಲೆಗೆಳಿಗೆ ಪಶು ಸಂಚಾರಿ ಅಂಬುಲೆನ್ಸ್ ನೀಡಲಾಗಿದ್ದು, ಉಳಿದ ಜಿಲ್ಲೆಗಳಿಗೂ ಸದ್ಯದಲ್ಲಿಯೇ ವಿಸ್ತರಿಸಲಾಗುತ್ತಿದೆ ಎಂದು ಪಶುಪಾಲನೆ, ಹಜ್ ಮತ್ತು ವಕ್ಫ್ ಸಚಿವರಾದ ಪ್ರಭು ಚವ್ಹಾಣ ತಿಳಿಸಿದರು.

ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಶುಕ್ರವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು ಪಶುಪಾಲಕರ, ರೈತರ ಜಾನುವಾರುಗಳ ಆರೋಗ್ಯ ಕಾಪಾಡುವ ದೃಷ್ಠಿಯಿಂದ ಸಂಚಾರಿ ಅಂಬುಲೆನ್ಸ್ಗಳನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೆ ವಿಸ್ತರಿಸಲಾಗುತ್ತಿದೆ. ಸಂಚಾತಿ ಅಂಬುಲೇನ್ಸ್ ವಿಶೇಷವಾದ ಪಶು ಸೇವಾ ಸೌಲಭ್ಯ, ಶಸ್ತç ಚಿಕಿತ್ಸಾ ಘಟಕ, ಪ್ರಯೋ ಶಾಲೆ, ಸ್ಕಾö್ಯನಿಂಗ್, ತುರ್ತು ಚಿಕಿತ್ಸಾ ಘಟಕ ಹೊಂದಿದೆ. ಒಟ್ಟಾರೆಯಾಗಿ ಪಶು ಆಸ್ಪತ್ರೆಯೇ ರೈತರ ಮನೆ ಬಾಗಿಲಿಗೆ ಬರಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಪಶುಪಾಲಕರು ಮತ್ತು ಜಾನುವಾರು ಸಾಕಣೆಯಲ್ಲಿ ತೊಡಗಿಸಿಕೊಂಡವರಿಗೆ ಇನ್ನು ಹೆಚ್ಚಿನ ರೀತಿಯಲ್ಲಿ ಪಶುವೈದ್ಯಕೀಯ ಸೇವೆಯನ್ನು ಸಮರ್ಪಕವಾಗಿ ನಿಗದಿತ ಕಾಲ ಮಿತಿಯಲ್ಲಿ ಕೈಗೊಳ್ಳಲು ವಾರ್ ರೂಮ್ ಮಾಡಲು ತಯಾರಿ ನಡೆಸಲಾಗುತ್ತಿದೆ. ದಿನ ೨೪ ಗಂಟೆಗಳ ಸೌಲಭ್ಯ, ಟೋಲ್ ಪ್ರೀ ನಂಬರ್ ವ್ಯವಸ್ಥೆ, ಕರೆ ಮಾಡಿದ ೪ ಗಂಟೆಗಳಲ್ಲಿ ಸೇವೆ ನೀಡಲು ಕ್ರಮಕೈಗೊಳ್ಳಲಾಗುತ್ತಿದೆ. ವಾರ್ ರೂಮ್ ಮೂಲಕ ರೈತರಿಗೆ ಕೋಳಿ, ಕುರಿ, ಹಂದಿ ಸಾಕಾಣಿಕೆದಾರರಿಗೆ ಆರೋಗ್ಯ ಸಂಬಂಧಿ ವಿಷಯ, ಆಪ್ತಸಮಾಲೋಚನೆ ಮತ್ತು ಸಲಹೆ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಪ್ರಾಣಿ ಹಿಂಸೆ ತಡೆಯಲು ಕಾನೂನುಗಳನ್ನು ಬಿಗಿಗೊಳಿಸಲು ಕ್ರಮವಹಿಸಲಾಗಿದ್ದು, ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿ ಪ್ರಾಣಿ ಕಲ್ಯಾಣ ಮಂಡಳ ಸ್ಥಾಪನೆ ಮಾಡಲಾಗಿದೆ. ಕೋವಿಡ್ ಸಂಕಷ್ಟದ ಸಮಯದಲ್ಲಿ ಅಧಿಕಾರಿಗಳು ಉತ್ತಮ ಕಾರ್ಯನಿರ್ವಹಿಸಿದ್ದಾರೆ. ಆರ್‌ಟಿಪಿಸಿಆರ್ ಯಂತ್ರಗಳನ್ನು ಕೋವಿಡ್ ಪತ್ತೆಗೆ ಹಸ್ತಾಂತರಿಸಲಾಗಿದೆ. ಪರಿಸರ ದಿನಾಚರಣೆ ಅಂಗವಾಗಿ ಪಶು ವೈದ್ಯ ಸಂಸ್ಥೆಗಳಲ್ಲಿ ಮತ್ತು ಫಾರಂಗಳಲ್ಲಿ ಗಿಡಗಳನ್ನು ಏಕಕಾಲಕ್ಕೆ ನೆಡಲಾಗಿದೆ ಎಂದು ತಿಳಿಸಿದರು.

ದೇಶದ ಹಲವು ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ಅನುಷ್ಠಾನಕ್ಕೆ ತಂದಿದ್ದು, ಕರ್ನಾಟಕದಲ್ಲಿಯೂ ಸಮರ್ಪಕವಾಗಿ ಕಾರ್ಯಗತಗೊಳಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಕರ್ನಾಟಕದಲ್ಲಿ ಗೋಹತ್ಯೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ ಜಾರಿಗೊಳಿಸಲು ಸರಕಾರ ಬದ್ದವಾಗಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ವೀರಣ್ಣ ಚರಂತಿಮಠ, ತಾ.ಪಂ ಅಧ್ಯಕ್ಷ ಚನ್ನನಗೌಡರ ಪರನಗೌಡರ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿ.ಪಂ ಸಿಇಓ ಟಿ.ಭೂಬಾಲನ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಉಪಸ್ಥಿತರಿದ್ದರು.

";