This is the title of the web page
This is the title of the web page

Live Stream

February 2025
S M T W T F S
 1
2345678
9101112131415
16171819202122
232425262728  

| Latest Version 9.4.1 |

State News

ತಾಯಿಯ ಕಷ್ಟ ನೋಡಲಾಗದೆ ಯುವಕ ಆತ್ಮಹತ್ಯೆ: ಸತ್ತ ಸರ್ಕಾರ ಸಾವಿನ ವ್ಯಾಪಾರ’ ಎಂಬ ಹ್ಯಾಷ್ ಟ್ಯಾಗ್ ಹಾಕಿದ ಎಚ್ಡಿಕೆ

ತಾಯಿಯ ಕಷ್ಟ ನೋಡಲಾಗದೆ ಯುವಕ ಆತ್ಮಹತ್ಯೆ: ಸತ್ತ ಸರ್ಕಾರ ಸಾವಿನ ವ್ಯಾಪಾರ’ ಎಂಬ ಹ್ಯಾಷ್ ಟ್ಯಾಗ್ ಹಾಕಿದ ಎಚ್ಡಿಕೆ

ಬೆಂಗಳೂರು: ಹಸಿವು ಹಾಗೂ ತಾಯಿಯ ಕಷ್ಟ ನೋಡಲಾಗದೆ ಬೆಳಗಾವಿಯ ಖಾನಾಪುರ ತಾಲ್ಲೂಕಿನಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಬೆಳಕಿಗೆ ಬಂದಿದೆ.

‘ಸತ್ತ ಸರಕಾರ ಸಾವಿನ ವ್ಯಾಪಾರ’ ಎಂಬ ಹ್ಯಾಷ್ ಟ್ಯಾಗ್ ಅಡಿ ಸರಣಿ ಟ್ವೀಟ್ (ಎಕ್ಸ್) ಮಾಡಿರುವ ಎಚ್ಡಿಕೆ, ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಅನ್ನ ಭಾಗ್ಯ, ಗೃಹ ಲಕ್ಷ್ಮೀ ಹೆಸರಿನಲ್ಲಿ ಲೋಕೋದ್ಧಾರ ಮಾಡಿದ್ದೇವೆ ಎಂದು ಸುಳ್ಳು ಲೆಕ್ಕ ಕೊಟ್ಟು ಜನರ ತೆರಿಗೆ ಹಣದಲ್ಲಿ ಪುಕ್ಕಟೆ ಪ್ರಚಾರ ಪಡೆಯುತ್ತಿರುವ ನಿಮ್ಮ ಲೊಳಲೊಟ್ಟೆ ಬಯಲಾಗಿದೆ .

ಸಿದ್ದರಾಮಯ್ಯನವರೇ.. ನುಡಿದಂತೆ ನಡೆದಿದ್ದೇವೆ ಎಂದರೆ ಇದೇನಾ ಮುಖ್ಯಮಂತ್ರಿಗಳೇ? ಎಂದು ಎಚ್ಡಿಕೆ ಪ್ರಶ್ನೆ ಮಾಡಿದ್ದು, ಗ್ಯಾರಂಟಿಗಳ ಮೂಲಕವೇ ಗತಿಗೆಟ್ಟ ಕಾಂಗ್ರೆಸ್ ಪಕ್ಷದ ಹೊಟ್ಟೆ ಹೊರೆಯುತ್ತಿರುವ ಮತಿಗೆಟ್ಟ ನಿಮ್ಮ ಸರಕಾರವು ಕಲ್ಯಾಣ ಕಾರ್ಯಕ್ರಮಗಳ ಕಪಟ ಪೋಷಾಕಿನಿಂದ ಮೆರೆಯುತ್ತಿದೆ. ಆ ಪೋಷಾಕು, ನಿಮ್ಮ ಢೋಂಗಿ ಧೀರತ್ವದ ಮುಖವಾಡ ಕಳಚಿ ನೆಲಕ್ಕೆ ಬಿದ್ದಿದೆ. ಇನ್ನಾದರೂ ಎಚ್ಚೆತ್ತುಕೊಳ್ಳಿ ಎಂದು ಹೇಳಿದ್ದಾರೆ.

Nimma Suddi
";