This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

National News

ಹೈಕೋರ್ಟ್ : ತಮಿಳುನಾಡಿನ ದೇವಾಲಯಗಳಿಗೆ ಹಿಂದೂಗಳಲ್ಲದವರು ಪ್ರವೇಶಿಸುವಂತಿಲ್ಲ

ಹೈಕೋರ್ಟ್ : ತಮಿಳುನಾಡಿನ ದೇವಾಲಯಗಳಿಗೆ ಹಿಂದೂಗಳಲ್ಲದವರು ಪ್ರವೇಶಿಸುವಂತಿಲ್ಲ

ಮಧುರೈ: ಹಿಂದೂಗಳಲ್ಲದವರಿಗೆ ಆಯಾ ದೇಗುಲಗಳಲ್ಲಿರುವ ಕೊಡಿಮರಂ ಪ್ರದೇಶದಿಂದ ಆಚೆಗೆ ಅನುಮತಿ ಇಲ್ಲ ಎಂಬ ಬೋರ್ಡ್‌ಗಳನ್ನು ಎಲ್ಲಾ ಹಿಂದೂ ದೇವಾಲಯಗಳಲ್ಲಿ ಅಳವಡಿಸುವಂತೆ ಮದ್ರಾಸ್ ಹೈಕೋರ್ಟ್ ಮಂಗಳವಾರ ತಮಿಳುನಾಡು ಮಾನವ ಸಂಪನ್ಮೂಲ ಮತ್ತು ದತ್ತಿ ಇಲಾಖೆಗೆ ನಿರ್ದೇಶನ ನೀಡಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಹಿಂದೂಗಳಿಗೂ ಕೂಡ ಧರ್ಮವನ್ನು ಪಾಲಿಸುವ ಮೂಲಭೂತ ಹಕ್ಕು ಇದೆ ಎಂದು ನ್ಯಾಯಾಲಯ ಹೇಳಿದೆ. ಅರುಲ್ಮಿಗು ಪಳನಿ ದಂಡಾಯುತಪಾಣಿ ಸ್ವಾಮಿ ದೇವಸ್ಥಾನ ಮತ್ತು ಅದರ ಉಪ ದೇವಾಲಯಗಳಿಗೆ ಹಿಂದೂಗಳಿಗೆ ಮಾತ್ರ ಅನುಮತಿ ನೀಡುವಂತೆ ಪ್ರತಿವಾದಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಡಿ ಸೆಂಥಿಲ್‌ಕುಮಾರ್ ಸಲ್ಲಿಸಿದ್ದ ಮನವಿಯನ್ನು ಆಲಿಸಿದ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಎಸ್ ಶ್ರೀಮತಿ ಈ ತೀರ್ಪು ನೀಡಿದ್ದಾರೆ.

ಎಲ್ಲಾ ಪ್ರವೇಶ ದ್ವಾರಗಳಲ್ಲಿ ಆ ನಿಟ್ಟಿನಲ್ಲಿ ಡಿಸ್‌ಪ್ಲೇ ಬೋರ್ಡ್‌ಗಳನ್ನು ಸ್ಥಾಪಿಸಬೇಕು ಎಂದು ಸೆಂಥಿಲ್‌ಕುಮಾರ್ ಬಯಸಿದ್ದು, ದಿಂಡಿಗಲ್ ಜಿಲ್ಲೆಯ ಪಳನಿಯಲ್ಲಿ ಪ್ರಸಿದ್ಧ ಮುರುಗನ್ ದೇವಾಲಯವಿದೆ. ಪ್ರತಿವಾದಿಗಳು ತಮಿಳುನಾಡು ಸರ್ಕಾರ, ಪ್ರಧಾನ ಕಾರ್ಯದರ್ಶಿ, ಪ್ರವಾಸೋದ್ಯಮ, ಸಂಸ್ಕೃತಿ ಮತ್ತು ಧಾರ್ಮಿಕ ದತ್ತಿ ಇಲಾಖೆ, ಆಯುಕ್ತರು, ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ (HR&CE) ಮತ್ತು ಪಳನಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಪ್ರತಿನಿಧಿಸಿದರು. ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯು ತಮಿಳುನಾಡಿನಲ್ಲಿ ಹಿಂದೂ ದೇವಾಲಯಗಳನ್ನು ನಿರ್ವಹಿಸುತ್ತದೆ.

ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ, ದೇವಸ್ಥಾನಗಳ ಪ್ರವೇಶ ದ್ವಾರ, ಧ್ವಜಸ್ತಂಭದ ಬಳಿ ಮತ್ತು ದೇಗುಲದ ಪ್ರಮುಖ ಸ್ಥಳಗಳಲ್ಲಿ ‘ಕೊಡಿಮರಂ ನಂತರ ದೇವಸ್ಥಾನದೊಳಗೆ ಹಿಂದೂ ಅಲ್ಲದವರಿಗೆ ಪ್ರವೇಶವಿಲ್ಲ’ ಎಂಬ ಫಲಕಗಳನ್ನು ಅಳವಡಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿದೆ.

Nimma Suddi
";