This is the title of the web page
This is the title of the web page

Live Stream

February 2025
S M T W T F S
 1
2345678
9101112131415
16171819202122
232425262728  

| Latest Version 9.4.1 |

State News

ನಾನು ಈವರೆಗೆ ಒಬ್ಬರನ್ನೂ ನಿಯೋಜನೆ ಮಾಡಿಲ್ಲ: ಸಚಿವ ಕೃಷ್ಣಬೈರೇಗೌಡ’

ನಾನು ಈವರೆಗೆ ಒಬ್ಬರನ್ನೂ ನಿಯೋಜನೆ ಮಾಡಿಲ್ಲ: ಸಚಿವ ಕೃಷ್ಣಬೈರೇಗೌಡ’

ಬೆಂಗಳೂರು: ಕಳೆದ ಸರ್ಕಾರ ತುಂಬಾ ಜನರನ್ನು ಬೇರೆಡೆ ನಿಯೋಜನೆ ಮಾಡಿದ್ದು, ನನಗೂ ಕನಿಷ್ಠ 2000 ಉದ್ಯೋಗಿಗಳ ನಿಯೋಜನೆಗೆ ಮನವಿ ಸಲ್ಲಿಸಲಾಗಿದೆ. ನಾನು ಈವರೆಗೆ ಒಬ್ಬರನ್ನೂ ನಿಯೋಜನೆ ಮಾಡಿಲ್ಲ. ಯಾರನ್ನೂ ಮೂಲ ಸ್ಥಾನದಿಂದ ನಿಯೋಜನೆಗೊಳಿಸದಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.

ತಾಲೂಕುಗಳಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಸೇರಿದಂತೆ ಕಂದಾಯ ಇಲಾಖೆಯ ವಿವಿಧ ಹಂತದ ನೌಕರರನ್ನು ಬೇರೆಡೆ ನಿಯೋಜನೆಗೊಳಿಸಲಾಗುತ್ತಿದ್ದು, ಉದ್ಯೋಗಿಗಳ ಕೊರತೆಯಿಂದಾಗಿ ಕಂದಾಯ ಇಲಾಖೆಯಲ್ಲಿ ಜನರಿಗೆ ಸರಿಯಾದ ಸಮಯಕ್ಕೆ ಕೆಲಸವಾಗುತ್ತಿಲ್ಲ” ಎಂದು ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೂಡ್ಲಿ ಅವರು ಪ್ರಶ್ನಿಸಿದ್ದರು.

ಪ್ರಶ್ನೆಗೆ ಉತ್ತರಿಸಿದಂತ ಅವರು, “ನಿಮ್ಮ ಪರ ನಾವಿದ್ದೇವೆ. ಇದರಲ್ಲಿ ಯಾವುದೂ ರಾಜಕೀಯ ಇಲ್ಲ. ಕುಂದಾಪುರ ತಾಲೂಕಿನಲ್ಲಿ ಕಂದಾಯ ಇಲಾಖೆಯ 110 ಹುದ್ದೆಗಳ ಪೈಕಿ 70 ಹುದ್ದೆಗಳನ್ನು ಈಗಾಗಲೇ ಭರ್ತಿ ಮಾಡಲಾಗಿದೆ. ಅಂದರೆ, ಶೇ.65ರಷ್ಟು ಸ್ಥಾನಗಳನ್ನು ಭರ್ತಿ ಮಾಡಲಾಗಿದೆ. ಉಳಿದ ಸ್ಥಾನಗಳನ್ನೂ ಶೀಘ್ರದಲ್ಲೇ ಭರ್ತಿ ಮಾಡಲಾಗುವುದು” ಎಂದು ಭರವಸೆ ನೀಡಿದರು.

Nimma Suddi
";