This is the title of the web page
This is the title of the web page

Live Stream

October 2024
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Politics NewsState News

ಪೆನ್‌ಡ್ರೈವ್ ಪ್ರಕರಣ ನೋಡಿದರೆ ದೇಶದಲ್ಲಿ ಇದಕ್ಕಿಂತ ಕೆಟ್ಟದ್ದೇನೂ ನಡೆದಿಲ್ಲ ಎಂಬಂತೆ ಭಾಸವಾಗುತ್ತಿದೆ, ಇದು ಗಿನ್ನಿಸ್ ದಾಖಲೆ ಮಾಡಬಹುದು.: ಸಚಿವ ಆರ್​ಬಿ ತಿಮ್ಮಾಪುರ

ಪೆನ್‌ಡ್ರೈವ್ ಪ್ರಕರಣ ನೋಡಿದರೆ ದೇಶದಲ್ಲಿ ಇದಕ್ಕಿಂತ ಕೆಟ್ಟದ್ದೇನೂ ನಡೆದಿಲ್ಲ ಎಂಬಂತೆ ಭಾಸವಾಗುತ್ತಿದೆ, ಇದು ಗಿನ್ನಿಸ್ ದಾಖಲೆ ಮಾಡಬಹುದು.: ಸಚಿವ ಆರ್​ಬಿ ತಿಮ್ಮಾಪುರ

ಬೆಂಗಳೂರು: ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಈ ಮಧ್ಯೆ ಸಚಿವ ಆರ್​​ಬಿ ತಿಮ್ಮಾಪುರ ವಿಜಯಪುರದಲ್ಲಿ ನೀಡಿರುವ ಹೇಳಿಕೆ ಕೂಡ ವಿವಾದಕ್ಕೀಡಾಗುತ್ತಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಈ ಪೆನ್‌ಡ್ರೈವ್ ಪ್ರಕರಣವನ್ನು ನೋಡಿದರೆ ದೇಶದಲ್ಲಿ ಇದಕ್ಕಿಂತ ಕೆಟ್ಟದ್ದೇನೂ ನಡೆದಿಲ್ಲ ಎಂಬಂತೆ ಭಾಸವಾಗುತ್ತಿದೆ. ಇದು ಗಿನ್ನಿಸ್ ದಾಖಲೆ ಮಾಡಬಹುದು. ಭಗವಾನ್ ಶ್ರೀಕೃಷ್ಣನ ಭಕ್ತಿಭಾವಕ್ಕೆ ಸ್ತ್ರೀಯರು ಪರವಶರಾಗುತ್ತಿದ್ದರು. ಆದರೆ, ಈ ಪ್ರಕರಣದಲ್ಲಿ ಹಾಗಲ್ಲ. ಕೃಷ್ಣನ ದಾಖಲೆಯನ್ನು ಮುರಿಯಲು ಪ್ರಜ್ವಲ್ ಬಯಸಿದ್ದಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.

ವಿಜಯಪುರ ಎಸ್ಸಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜೂ ಆಲಗೂರು ಪರ ಚುನಾವಣಾ ಪ್ರಚಾರ ನಡೆಸಿದ ವೇಳೆ ತಿಮ್ಮಾಪುರ ಈ ಹೇಳಿಕೆ ನೀಡಿದ್ದಾರೆ. ವಿಜಯಪುರ ನಗರದ ಪಾಟೀಲ್ ಗಾರ್ಡೇನಿಯಾದಲ್ಲಿ ಸಭೆ ನಡೆಸಿದ ಅವರು, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ದ ಕಿಡಿ ಕಾರಿದರು.

ಕಾಂಗ್ರೆಸ್ ಸರ್ಕಾರದ ಕೊಡುಗೆಗಳಿಗೆ ಜನರು ಮೆಚ್ಚಿದ್ದಾರೆ. ನಮ್ಮ ಯೋಜನೆಗಳ ಕಾರಣ ಜನರು ಕಾಂಗ್ರೆಸ್ ಪರವಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದರು.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವಿಚಾರವಾಗಿ ತನಿಖೆಗೆ ರಾಜ್ಯ ಸರ್ಕಾರ ಎಸ್​​ಐಟಿ ರಚನೆ ಮಾಡಿದ್ದು, ಸದ್ಯ ವಿದೇಶದಲ್ಲಿರುವ ಪ್ರಜ್ವಲ್​ ವಿರುದ್ಧ ಲುಕ್​ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

ಪ್ರಜ್ವಲ್​ರನ್ನು ಭಗವಾನ್ ಶ್ರೀಕೃಷ್ಣನ ಹೋಲಿಕೆ ಮಾಡಿ ತಿಮ್ಮಾಪುರ ಹೇಳಿಕೆ ನೀಡಿದ್ದಾರೆ. ಶ್ರೀಕೃಷ್ಣನ ದಾಖಲೆಯನ್ನು ಕೂಡ ಮುರಿಯಬೇಕು ಎಂದು ಪ್ರಜ್ವಲ್ ಅಂದುಕೊಂಡಿರಬೇಕು. ಆದರೆ, ಇದು ಗಿನ್ನಿಸ್ ದಾಖಲೆಯಾಗಬಹುದೇನೋ ಎಂದು ಸೂಚಿಸಿದರು.

 

 

";