This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ರಸಗೊಬ್ಬರ ಮಾರಾಟ ಮಳಿಗೆಗೆ ಡಿಸಿ ಭೇಟಿ ಪರಿಶೀಲನೆ

ನಿಮ್ಮ ಸುದ್ದಿ ಬಾಗಲಕೋಟೆ

ಮುಧೋಳ ಪಟ್ಟಣದಲ್ಲಿರುವ ರಸಗೊಬ್ಬರ ಮಾರಾಟ ಮಳಿಗೆಗೆ ಜಿಲ್ಲಾಧಿಕಾರಿ ಪಿ.ಸುನೀಲ್‍ಕುಮಾರ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಭೇಟಿ ಸಂದರ್ಭದಲ್ಲಿ ಪ್ರತಿಯೊಂದು ಮಾರಾಟ ಪ್ರಕ್ರಿಯೆ ಪಿಓಎಸ್ ಮಷೀನ್ ಮೂಲಕ ಕೈಗೊಳ್ಳಬೇಕು. ರೈತರು ಸಹ ಪಿಓಎಸ್ ಮೂಲಕ ಖರೀದಿ ಮಾಡುವಂತೆ ಅರಿವು ಮೂಡಿಸುವ ಕಾರ್ಯವಾಗಬೇಕು. ಪಿಓಎಸ್ ಮೂಲಕ ಮಾರಾಟಗಾರರು ಮಾರಾಟ ಮಾಡದಿರುವ ಬಗ್ಗೆ ಗಮನಕ್ಕೆ ಬಂದಲ್ಲಿ ಅಂತಹ ಮಹಿಳೆಗಳ ಮೇಲೆ ಸೂಕ್ತ ಕ್ರಮಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.

ನಂತರ ರೈತರ ಸಂಪರ್ಕ ಕೇಂದ್ರಕ್ಕೆ ಭೇಟಿದ ಜಿಲ್ಲಾಧಿಕಾರಿಗಳು ಹಿಂಗಾರು ಹಂಗಾಮಿನ ಬೀಜ ಮತ್ತು ಸರಗೊಬ್ಬರ ವಿತರಣೆ ಪ್ರಕ್ರಿಯೆ ಹಾಗೂ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದುಕೊಂಡರು. ಅಲ್ಲದೇ ಆನ್‍ಲೈನ್ ಪೆಮೆಂಟ್ ಬಗ್ಗೆ ಮಾಹಿತಿ ಪಡೆದುಕೊಂಡರು. ಭೇಟಿ ಸಂದರ್ಭದಲ್ಲಿ ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಡಾ.ಚೇತನಾ ಪಾಟೀಲ ಸೇರಿದಂತೆ ಕೃಷಿ ಇಲಾಖೆಯ ತಾಲೂಕಾ ಅಧಿಕಾರಿಗಳು ಉಪಸ್ಥಿತರಿದ್ದರು.

Nimma Suddi
";