This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ನನ್ನ ಜತೆ ಕಾಂಗ್ರೆಸ್ ಸೇರಿದವರೆಲ್ಲ ನಾವು ನಿಮ್ಮ ಜೊತೆ ಬಿಜೆಪಿಗೆ ಬರುತ್ತೇವೆ ಎನ್ನುತ್ತಿದ್ದಾರೆ : ಜಗದೀಶ್ ಶೆಟ್ಟರ್ ಸ್ಫೋಟಕ ಹೇಳಿಕೆ

ನನ್ನ ಜತೆ ಕಾಂಗ್ರೆಸ್ ಸೇರಿದವರೆಲ್ಲ ನಾವು ನಿಮ್ಮ ಜೊತೆ ಬಿಜೆಪಿಗೆ ಬರುತ್ತೇವೆ ಎನ್ನುತ್ತಿದ್ದಾರೆ : ಜಗದೀಶ್ ಶೆಟ್ಟರ್ ಸ್ಫೋಟಕ ಹೇಳಿಕೆ

ಹುಬ್ಬಳ್ಳಿ: ನನ್ನ ಜತೆ ಕಾಂಗ್ರೆಸ್ ಸೇರಿದವರೆಲ್ಲ ವಾಪಸ್ ಬರುತ್ತಾರೆ. ನಾವು ನಿಮ್ಮ ಜೊತೆ ಬಿಜೆಪಿಗೆ ಬರುತ್ತೇವೆ ಎನ್ನುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಫೋಟಕ ಹೇಳಿಕೆ ನೀಡಿದ್ದು ಬೆಳಕಿಗೆ ಬಂದಿದೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೇರೆ ಜಿಲ್ಲೆಯ ಕಾಂಗ್ರೆಸ್​ ಮುಖಂಡರು ಬಿಜೆಪಿ ಸೇರುವುದಕ್ಕೆ ಆಸೆ ವ್ಯಕ್ತಪಡಿಸುತ್ತಿದ್ದು, ಕಾಂಗ್ರೆಸ್​ನ ಬಹಳಷ್ಟು ಜನ ನನ್ನ ಸಂಪರ್ಕದಲ್ಲಿದ್ದಾರೆ. ಅವರೆಲ್ಲರೂ ಆದಷ್ಟು ಶೀಘ್ರದಲ್ಲಿ ಬಿಜೆಪಿ ಸೇರಲಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಪಕ್ಷದ ವರ್ಚಸ್ಸು ಬೆಳೆಯುತ್ತಿಲ್ಲ. ಕಾಂಗ್ರೆಸ್ ತೊರೆಯಲು ಅಲ್ಲಿನವರು ಮನಸ್ಸು ಮಾಡುತ್ತಿದ್ದಾರೆ ಎಂದರು.

ಶಾಸಕ ಬಾಲಕೃಷ್ಣ ಹೇಳಿಕೆ ಕಾಂಗ್ರೆಸ್‌ನ ಮನಸ್ಥಿತಿ ತೋರಿಸುತ್ತದೆ. ಚುನಾವಣೆಗಾಗಿ ಭಾಗ್ಯಗಳನ್ನು ಕೊಟ್ಟರು ಎನ್ನುವುದು ಭಾವನೆ ಜನರಲ್ಲಿ ಮೂಡಿದೆ. ಲೋಕಸಭೆ ಚುನಾವಣೆ ನಂತರ ಭಾಗ್ಯಗಳು ಇರಲ್ಲಾ ಅನ್ನುವ ಪರಿಸ್ಥಿತಿ ಕಾಣಿಸುತ್ತಿದೆ ಮೋದಿಯವರು ಮತ್ತೊಮ್ಮೆ ಪ್ರಧಾನಮಂತ್ರಿ ಮಾಡುವುದೇ ನಮ್ಮ ಗುರಿ ನಾನು ಪಕ್ಷ ಕೊಡುವ ಯಾವುದೇ ಜವಾಬ್ದಾರಿಯನ್ನಾದರೂ ನಿರ್ವಹಿಸಲು ಸಿದ್ಧ ಎಂದು ತಿಳಿಸಿದರು.

ಪಕ್ಷ ಹೇಳಿದರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ. ಬಿಜೆಪಿ ವರಿಷ್ಠರು ಗೌರವಯುತ ಸ್ಥಾನ ಕೊಡುತ್ತೇವೆ ಅನ್ನುವಂತಹ ಭರವಸೆ ನೀಡಿದ್ದಾರೆ. ಮೋದಿಯವರು ಮತ್ತೊಮ್ಮೆ ಪ್ರಧಾನಮಂತ್ರಿ ಮಾಡಬೇಕು ಎನ್ನುವುದೇ ನಮ್ಮ ಗುರಿ ಎಂದು ಹೇಳಿದ್ದಾರೆ.ಬಜೆಟ್ ವಿಚಾರವಾಗಿ ಮಾತನಾಡಿದ ಅವರು, ನಿರ್ಮಲಾ ಸೀತಾರಾಮನ್ ಅವರು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್​ ಮಂಡನೆ ಮಾಡಿದ್ದಾರೆ. ಯುವ ಸಬಲೀಕರಣಕ್ಕೆ, ರೈತರ ಕ್ಷೇಮಾಭಿವೃದ್ಧಿ, ಬಡವರ ಕಲ್ಯಾಣ, ಮಹಿಳೆಯರ ಅಭಿವೃದ್ಧಿಗೆ ಪೂರಕವಾಗಿದೆ ಎಂದು ವಿವರಿಸಿದರು.

";