This is the title of the web page
This is the title of the web page

Live Stream

January 2025
S M T W T F S
 1234
567891011
12131415161718
19202122232425
262728293031  

| Latest Version 9.4.1 |

State News

ಗ್ಯಾರಂಟಿ ರದ್ದು ಹೇಳಿಕೆ ವಿವಾದ: ಮಾಗಡಿ ಬಾಲಕೃಷ್ಣ ಹೇಳಿಕೆಯನ್ನು ಖಂಡಿಸಿ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಜೆಡಿಎಸ್‌ ದೂರು

ಗ್ಯಾರಂಟಿ ರದ್ದು ಹೇಳಿಕೆ ವಿವಾದ: ಮಾಗಡಿ ಬಾಲಕೃಷ್ಣ ಹೇಳಿಕೆಯನ್ನು ಖಂಡಿಸಿ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಜೆಡಿಎಸ್‌ ದೂರು

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋತಲ್ಲಿ ಗ್ಯಾರಂಟಿ ಯೋಜನೆಗಳು ರದ್ದಾಗಲಿದೆ ಎಂದು ಕಾಂಗ್ರೆಸ್ ಶಾಸಕ ಎಚ್‌ಸಿ ಬಾಲಕೃಷ್ಣ ನೀಡಿರುವ ಹೇಳಿಕೆಯನ್ನು ಖಂಡಿಸಿ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಜೆಡಿಎಸ್‌ ದೂರು ನೀಡಿದ್ದು ಬೆಳಕಿಗೆ ಬಂದಿದೆ.

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ನಿಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರನ್ನು ಭೇಟಿ ಮಾಡಿ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ವಿರುದ್ಧ ದೂರು ನೀಡಿದ್ದು, ಲೋಕಸಭೆ ಚುನಾವಣೆಯಲ್ಲಿ ಜನರು ಅವರಿಗೆ ಮತ ನೀಡದಿದ್ದರೆ 5 ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯಲು ತಮ್ಮ ಪಕ್ಷದೊಂದಿಗೆ ಚರ್ಚಿಸುತ್ತೇನೆ ಎಂಬುದಾಗಿ ಅವರು ಹೇಳಿಕೆ ನೀಡಿರುತ್ತಾರೆ.

ಸಾರ್ವಜನಿಕರಿಗೆ ಬೆದರಿಕೆ ಮತ್ತು ಅವರ ಮತದಾನದ ನಡವಳಿಕೆಯನ್ನು ಭ್ರಷ್ಟಗೊಳಿಸುವ ಸ್ಪಷ್ಟ ಪ್ರಕರಣವಾಗಿದೆ ಎಂದು ಜೆಡಿಎಸ್ ತನ್ನ ದೂರಿನಲ್ಲಿ ತಿಳಿಸಿದೆ.ಜನತಾ ಪ್ರಾತಿನಿಧ್ಯ ಕಾಯಿದೆಯ ಪ್ರಕಾರ ಭಾರತೀಯ ಸಂವಿಧಾನದ ನಿಬಂಧನೆಗಳನ್ನು ಅಥವಾ 1951ರ ಜನತಾ ಪ್ರಾತಿನಿಧ್ಯ ಕಾಯಿದೆಯನ್ನು ಉಲ್ಲಂಘಿಸಿದ ಪಕ್ಷದಲ್ಲಿ ಆ ರಾಜಕೀಯ ಪಕ್ಷದ ಮಾನ್ಯತೆ ರದ್ದು ಮಾಡುವ ಅಧಿಕಾರವನ್ನು ಚುನಾವಣಾ ಆಯೋಗವು ಹೊಂದಿದೆ ಎಂದು ಹೇಳಿದರು.

Nimma Suddi
";