This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

State News

ಸೆಕ್ಯುರಿಟಿ ಗಾರ್ಡ್​ ಕೆಲಸಕ್ಕೆ ಹೋದ ಕಲಬುರಗಿ ಕನ್ನಡಿಗರನ್ನು ಉಕ್ರೇನ್ ಯುದ್ದಕ್ಕೆ ನಿಯೋಜಿಸಿದ ರಷ್ಯಾ

ಸೆಕ್ಯುರಿಟಿ ಗಾರ್ಡ್​ ಕೆಲಸಕ್ಕೆ ಹೋದ ಕಲಬುರಗಿ ಕನ್ನಡಿಗರನ್ನು ಉಕ್ರೇನ್ ಯುದ್ದಕ್ಕೆ ನಿಯೋಜಿಸಿದ ರಷ್ಯಾ

ಕಲಬುರಗಿ: ಯುರೋಪ್‌ನ ಅತಿದೊಡ್ಡ ದೇಶಗಳಲ್ಲಿ ಒಂದಾಗಿರುವ ಉಕ್ರೇನ್​ನಲ್ಲಿ ಸೆಕ್ಯುರಿಟಿ ಗಾರ್ಡ್​ ಕೆಲಸಕ್ಕಾಗಿ ಹೋಗಿದ್ದ ಕಲಬುರಗಿಯ ಯುವಕರು ಅಲ್ಲೇ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಸೆಕ್ಯುರಿಟಿ ಗಾರ್ಡ್​ ಕೆಲಸಕ್ಕೆ ಹೋಗಿದವರು ಉಕ್ರೇನ್ ಬಾರ್ಡರ್​ನಲ್ಲಿ ಯುದ್ದಕ್ಕೆ ನಿಯೋಜನೆಗೊಂಡಿದ್ದಾರೆ. ತರಬೇತಿ ನಡೆದಿದೆ ಅಂತಾ ಹೇಳಿ ನಮ್ಮನ್ನ ಬಾರ್ಡರ್ ನಲ್ಲಿ ನಿಯೋಜನೆ ಮಾಡಿದ್ದಾರೆ ಎಂದು ಸಿಲುಕಿಕೊಂಡ ಯುವಕನೋರ್ವವ ತಂದೆ ಅಳಲು ತೋಡಿಕೊಂಡಿದ್ದು, ಉದ್ಯೋಗಕ್ಕಾಗಿ ತೆರಳಿದ್ದ ಯುವಕರನ್ನು ರಷ್ಯಾ ಯುದ್ಧಕ್ಕೆ ಬಳಸಿಕೊಳ್ಳುತ್ತಿದೆ ಎಂದು ಇತ್ತೀಚೆಗೆ ಹೈದರಾಬಾದ್​ನಲ್ಲಿ ಎಐಎಂಐಎಂ ಸಂಸದ ಅಸಾದುದ್ದೀನ್ ಒವೈಸಿ ಹೇಳಿಕೆ ನೀಡಿದರು.

ಕೆಲಸಕ್ಕಾಗಿ ಕಲಬುರಗಿಯ 4 ಯುವಕರು ಸೇರಿ ಭಾರತದ 6 ಯುವಕರು ಬಾಬಾ ಏಜೆಂಟ್ ಮೂಲಕ 2023 ಡಿಸೆಂಬರ್ 5 ರಂದು ರಷ್ಯಾಕ್ಕೆ ತೆರಳಿದ್ದರು. ಸೆಕ್ಯುರಿಟಿ ಕೆಲಸ ಕೊಡಿಸುವುದಾಗಿ ಹೇಳಿ ವಂಚಕ ಪ್ರತಿಯೊಬ್ಬ ಯುವಕರ ಬಳಿ ಮೂರು ಲಕ್ಷ ಹಣ ಪಡೆದುಕೊಂಡಿದ್ದ.ಈಗ ಕೆಲಸ ಸಿಗುವ ಆಸೆಯಲ್ಲಿ ಉಕ್ರೇನ್​ಗೆ ಹೋದ ಯುವಕರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಕಳಬುರಗಿಯ ಆಳಂದ ತಾಲೂಕಿನ ನರೋಣದ ಸೈಯದ್ ಇಲಿಯಾಸ್ ಹುಸೇನ್, ಮೊಹಮ್ಮದ್ ಸಮೀರ್ ಅಹಮದ್, ಸೋಫಿಯಾ ಮೊಹಮ್ಮದ್ ರಷ್ಯಾದಲ್ಲಿ ಸಿಲುಕಿಕೊಂಡಿದ್ದಾರೆ.

ಉಕ್ರೇನ್ ನಲ್ಲಿರೋ ಹುಡುಗನ ತಂದೆ ನವಾಜ್ ಕಾಳಗಿ, ನನ್ನ ಮಗನಿಗೆ ಏಜೆಂಟ್​ಗಳು ಮೋಸ ಮಾಡಿದ್ದಾರೆ. ಅವನು ಸಮಸ್ಯೆಯಲ್ಲಿದ್ದಾನೆ. ನನ್ನ ಮಕ್ಕಳಿಗೆ ಮೋಸ ಆಗಿದೆ ಭಾರತದ ಅನೇಕ ಜನರಿಗೆ ಮೋಸ ಆಗಿದೆ ಎಂದು ಕಣ್ಣೀರು ಹಾಕಿದ್ದಾರೆ. ಉಕ್ರೇನ್ ಬಾರ್ಡರ್​ನಲ್ಲಿ ಯುದ್ದದಲ್ಲಿ ನಿಯೋಜನೆ ಮಾಡಿದ್ದಾರೆ. ತರಬೇತಿ ನಡೆದಿದೆ ಅಂತಾ ಹೇಳಿ ಬಾರ್ಡರ್ ನಲ್ಲಿ ನಿಯೋಜನೆ ಮಾಡಿದ್ದಾರೆ. ಮತ್ತೊಬ್ಬ ಯುವಕನನ್ನ ಎಲ್ಲಿ ಹಾಕಿದ್ದಾರೆ ಅಂತಾ ಇದುವರೆಗೂ ಗೊತ್ತಾಗಿಲ್ಲ ಎಂದು ಯುವಕನ ತಂದೆ ಅಳಲು ತೋಡಿಕೊಂಡಿದ್ದಾರೆ.