This is the title of the web page
This is the title of the web page

Live Stream

March 2025
S M T W T F S
 1
2345678
9101112131415
16171819202122
23242526272829
3031  

| Latest Version 9.4.1 |

State News

ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ ವಿರುದ್ಧದ ಎಫ್​ಐಆರ್​ಗೆ ಕರ್ನಾಟಕ ಹೈಕೋರ್ಟ್ ತಡೆ

ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ ವಿರುದ್ಧದ ಎಫ್​ಐಆರ್​ಗೆ ಕರ್ನಾಟಕ ಹೈಕೋರ್ಟ್ ತಡೆ

ಬೆಂಗಳೂರು: ನಗರದ ನಗರ್ತಪೇಟೆಯಲ್ಲಿ ಮುಖೇಶ್ ಎಂಬ ಯುವಕನ ಮೇಲೆ ಹಲ್ಲೆ ಖಂಡಿಸಿ ನಡೆಸಿದ್ದ ಪ್ರತಿಭಟನೆ ಸಂಬಂಧ ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಕೇಸ್‌ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಹಾಗೇ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತ ಆರೋಪಿಯನ್ನು ತಮಿಳುನಾಡಿಗೆ ಲಿಂಕ್ ಮಾಡಿರುವ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧದ ಎಫ್‌ಐಆರ್​ಗೂ ಹೈಕೋರ್ಟ್ ತಡೆ ನೀಡಿದೆ ಎಂದು ಮಾಹಿತಿ ತಿಳಿದು ಬಂದಿದೆ.

ನಗರ್ತಪೇಟೆಯಲ್ಲಿರುವ ಮೊಬೈಲ್ ಅಂಗಡಿ ಮಾಲೀಕ ಮುಖೇಶ್ ಎಂಬುವರ ಮೇಲೆ ನಡೆದಿದ್ದ ಹಲ್ಲೆ ಖಂಡಿಸಿ ಕಳೆದ ಮಂಗಳವಾರ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ತೇಜಸ್ವಿ ಸೂರ್ಯ, ಮತೀಯ ಭಾವಣೆ ಕೆರಳಿಸುವಂತೆ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಚಿಕ್ಕಪೇಟೆ ನಿವಾಸಿಯೊಬ್ಬರು ಚುನಾವಣಾಧಿಕಾರಿಗೆ ದೂರು ನೀಡಿದ್ದರು. ಬಳಿಕ ಆಯೋಗದ ಸೂಚನೆ ಮೇರೆಗೆ ಹಲಸೂರು ಗೇಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಪ್ರಕರಣವನ್ನು ರದ್ದು ಕೋರಿ ತೇಜಸ್ವಿ ಸೂರ್ಯ, ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇಂದು (ಮಾರ್ಚ್ 22) ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್​, ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.

ಇಡೀ ಊರಲ್ಲಿ ಪ್ರತಿಭಟನೆ ನಡೆಸಿದರೆ ಜನ ಓಡಾಡಬೇಡವೇ ಎಂದು ಸಂಸದ ತೇಜಸ್ವಿ ಸೂರ್ಯ ಪರ ವಕೀಲ ಪ್ರಸನ್ನ ಕುಮಾರ್ ಅವರಿಗೆ ಹೈಕೋರ್ಟ್ ಪ್ರಶ್ನಿಸಿದೆ. ಇದಕ್ಕೆ ಪ್ರಸನ್ನ ಕುಮಾರ್ ಪ್ರತಿಕ್ರಿಯಿಸಿ, ಯಾವುದೇ ಕಾನೂನುಬಾಹಿರ ಕೃತ್ಯ ನಡೆದಿಲ್ಲ. ಒಂದೆಡೆ ಸೇರಿ ಘಟನೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ ಎಂದು ವಾದ ಮಂಡಿಸಿದರು ಎಂದು ಮಾಹಿತಿ ಕಂಡು ಬಂದಿದೆ.

Nimma Suddi
";