This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

Local NewsNational NewsPolitics NewsState News

Karnataka Politics : ಎಚ್‌ಡಿಕೆ ಮೊದಲು ಎನ್‌ಡಿಎನಿಂದ ಆಚೆ ಬಂದು ನನ್ನ ಬೆಂಬಲಿಸಲಿ: ಡಿಕೆಶಿ ತಿರುಗೇಟು

Karnataka Politics : ಎಚ್‌ಡಿಕೆ ಮೊದಲು ಎನ್‌ಡಿಎನಿಂದ ಆಚೆ ಬಂದು ನನ್ನ ಬೆಂಬಲಿಸಲಿ: ಡಿಕೆಶಿ ತಿರುಗೇಟು

ಬೆಂಗಳೂರು: ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ (Former CM HD Kumaraswamy) ಅವರು ಎನ್‌ಡಿಎ ಮೈತ್ರಿಕೂಟಕ್ಕೆ (NDA Alliance) ಸೇರಿದವರು. ನಮಗೂ ಎನ್‌ಡಿಎಗೂ ಸಂಬಂಧವಿಲ್ಲ. ಮೊದಲು ಎನ್‌ಡಿಎಯಿಂದ ಆಚೆ ಬಂದು ನಂತರ ಬೆಂಬಲದ ಬಗ್ಗೆ ಮಾತನಾಡಲಿ. ಅವರು ಬೆಂಬಲ ನೀಡುವ ಕಾಲದಲ್ಲೇ ಬೆಂಬಲ ನೀಡಲಿಲ್ಲ. ಈಗೇನು ಬೆಂಬಲ ನೀಡುತ್ತಾರೆ? ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ. ರಾಜ್ಯ ರಾಜಕೀಯದಲ್ಲಿ (Karnataka Politics) ಬದ್ಧ ವೈರಿಗಳಾಗಿರುವ ಉಭಯ ನಾಯಕರು ಈಗ ಮತ್ತೊಂದು ಸುತ್ತಿನ ಮಾತಿನ ಯುದ್ಧಕ್ಕೆ ಸಿದ್ಧವಾಗಿದ್ದಾರೆ.

ಡಿ.ಕೆ. ಶಿವಕುಮಾರ್ ಅವರು ನಾಳೆಯೇ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ 19 ಶಾಸಕರ ಬೆಂಬಲ ನೀಡುತ್ತೇವೆ’ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಮೊದಲು ಎನ್‌ಡಿಎ ಮೈತ್ರಿಕೂಟದಿಂದ ಹೊರಗೆ ಬರಲಿ ಎಂದು ಹೇಳಿದರು.

ಎಚ್‌ಡಿಕೆ ಮಾತು ಕೇಳಿ ಸಂತಸವಾಯಿತು
ಎಚ್.ಡಿ. ಕುಮಾರಸ್ವಾಮಿ ಅವರ ಮಾತು ಕೇಳಿ ಬಹಳ ಸಂತೋಷವಾಗಿದೆ. ಸದ್ಯ ನಮಗೆ ರಾಜ್ಯದ ಜನತೆ 136 ಸೀಟು ಜತೆ ಅಧಿಕಾರ ಕೊಟ್ಟಿದ್ದಾರೆ. ಅವರು ಉತ್ತಮ ವಿರೋಧ ಪಕ್ಷದ ನಾಯಕನಾಗಿ ಸರ್ಕಾರವನ್ನು ತಿದ್ದುವ ಕೆಲಸ ಮಾಡಲಿ. ಟೀಕೆ ಮಾಡುವುದನ್ನು ಬಿಟ್ಟು, ಸರ್ಕಾರವನ್ನು ತಿದ್ದಲಿ. ಕಾಂಗ್ರೆಸ್ ಹಾಗೂ ಬಿಜೆಪಿ ತಲಾ ಒಂದೊಂದು ಬಾರಿ ಅವರನ್ನು ಮುಖ್ಯಮಂತ್ರಿ ಮಾಡಿದೆ. ಅವರ ತಂದೆಯವರನ್ನು ಕಾಂಗ್ರೆಸ್ ಪ್ರಧಾನಮಂತ್ರಿ ಮಾಡಿದೆ. ಅವರಿಗಿರುವ ಅಪಾರ ಅನುಭವದ ಮೂಲಕ ನಮಗೆ ಮಾರ್ಗದರ್ಶನ ನೀಡಲಿ. ಈಗ ಜನ ನಮಗೆ ಆಶೀರ್ವಾದ ಮಾಡಿದ್ದಾರೆ. ಅವರ ಪ್ರೀತಿ ವಿಶ್ವಾಸಕ್ಕೆ ನಮಸ್ಕಾರ” ಎಂದು ತಿಳಿಸಿದರು.

ಕಾಂಗ್ರೆಸ್‌ ಶಾಸಕರು, ಸಚಿವರಿಗೆ ಡಿಕೆಶಿ ವಾರ್ನಿಂಗ್!
ಕರ್ನಾಟಕ ಕಾಂಗ್ರೆಸ್‌ನಲ್ಲಿ (‌Congress Karnataka) ಸಿಎಂ ಗಾದಿ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಸಚಿವರು ಮತ್ತು ಶಾಸಕರ ಬಹಿರಂಗವಾಗಿ ನೀಡುತ್ತಿರುವ ಹೇಳಿಕೆಗೆ ಬ್ರೇಕ್‌ ಹಾಕಲು ಕೆಪಿಸಿಸಿ ಅಧ್ಯಕ್ಷ, ಡಿ.ಕೆ. ಶಿವಕುಮಾರ್‌ (DCM DK Shivakumar) ಬ್ರೇಕ್‌ ಹಾಕಲು ಮುಂದಾಗಿದ್ದಾರೆ. ಯಾರೂ ರಾಜಕೀಯ ಭವಿಷ್ಯವನ್ನು (Political Future) ಹಾಳು ಮಾಡಿಕೊಳ್ಳಲು ಹೋಗಬೇಡಿ. ಜತೆಗೆ ಪಕ್ಷದ ಭವಿಷ್ಯವನ್ನು ಸಹ ಹಾಳು ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

ಕಾವೇರಿ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ನಾವು ಜನಸೇವೆಯನ್ನು ಮಾಡಬೇಕು. ಗ್ಯಾರಂಟಿ ಯೋಜನೆ (Congress Guarantee Scheme) ಸಮರ್ಪಕವಾಗಿ ಜಾರಿಯಾಗಿದೆಯೇ ಎಂದು ಪರಿಶೀಲನೆ ಮಾಡಬೇಕು. ಲೋಕಸಭಾ ಚುನಾವಣೆ (Lok Sabha Election 2024) ನಮಗೆ ಬಹು ಮುಖ್ಯವಾಗಿದೆ. ಈ ಕಾರಣಕ್ಕೆ ಸಚಿವರಿಗೆ ಪ್ರವಾಸ ಮಾಡುವಂತೆ ಇಂದು ಸಿಎಂ ನಿವಾಸದಲ್ಲಿ ನಡೆದ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ನಲ್ಲಿ (Breakfast meeting) ಸೂಚನೆ ಕೊಟ್ಟಿದ್ದೇವೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಜಿಲ್ಲಾವಾರು ಸರ್ವೆಗೆ ಸೂಚನೆ
ಸಚಿವರಿಗೆ ಜಿಲ್ಲಾವಾರು ಸರ್ವೆ ಮಾಡಿ ವರದಿ ನೀಡಲು ಸೂಚಿಸಿದ್ದೆವು. ಇನ್ನೂ ಕೆಲವರು ನಮಗೆ ವರದಿ ಕೊಟ್ಟಿಲ್ಲ. ಅವರು ವರದಿ ಕೊಟ್ಟ ಬಳಿಕ‌ ನಾವು ಸರ್ವೇ ಮಾಡಿಸಬೇಕು. ಮತದಾರರ ಮಿಡಿತ ಪರೀಕ್ಷೆ ಮಾಡಿಸಬೇಕು. ಅದಕ್ಕೆ‌ ಇಂದು ಸಚಿವರಿಗೆ ಸೂಚನೆ ನೀಡಿದ್ದೇವೆ. ಯಾರು ಕೂಡ ಮಾತನಾಡಬೇಡಿ ಅಂತ ಹೇಳಿದ್ದೇವೆ. ನಾನು ಮತ್ತು ಸಿಎಂ ಸೇರಿದಂತೆ ಯಾರೂ ಮಾತನಾಡಬಾರದು. ಐದು ವರ್ಷದ ನಮಗೆ ಆಡಳಿತ ಮಾಡಲು ಅವಕಾಶ ನೀಡಿದ್ದಾರೆ ಎಂದು ಹೇಳಿದರು.