This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Politics NewsState News

ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿಗೆ ಹೋಗುತ್ತೇನೆ : ಕೆಎಸ್ ಈಶ್ವರಪ್ಪ

ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿಗೆ ಹೋಗುತ್ತೇನೆ : ಕೆಎಸ್ ಈಶ್ವರಪ್ಪ

ಶಿವಮೊಗ್ಗ: ನಾನು ಯಾವುದೇ ಉಚ್ಚಾಟನೆಗೆ ಹೆದರುವುದಿಲ್ಲ. ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿಗೆ (BJP) ಹೋಗುತ್ತೇನೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಬಿಜೆಪಿಯಿಂದ 6 ವರ್ಷ ಉಚ್ಚಾಟನೆ ಬೆನ್ನಲ್ಲೇ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪ್ಪ, ಮಕ್ಕಳು ಆರಂಭದಿಂದ ಸುಳ್ಳು ಹೇಳುತ್ತಾ ಬಂದಿದ್ದಾರೆ. ಅವರು ಷಡ್ಯಂತ್ರ ಮಾಡುತ್ತಾ ಬಂದರು. ಅವರು ಯಾವ ಮುಖ ಇಟ್ಟುಕೊಂಡು ಉತ್ತರ ನೀಡುತ್ತಾರೆ. ಅವರು ಪ್ರಕ್ರಿಯೆ ನೀಡಲಿ, ನಂತರ ನಾನು ಅವರಿಗೆ ಉತ್ತರ ನೀಡುತ್ತೇನೆ ಎಂದು ವಾಗ್ದಾಳಿ ಮಾಡಿದರು.

ನಾನು ಐದು ಬಾರಿ ಕಮಲದ ಚಿಹ್ನೆಯಿಂದ ಸ್ಪರ್ಧೆ ಮಾಡಿದ್ದೇನೆ. ನನಗೆ ರೈತನ ಚಿಹ್ನೆ ಬಂದಿರುವುದು ಸಂತೋಷ ತಂದಿದೆ. ಲೋಕಸಭೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ನನಗೆ ಶೇ 60 ರಷ್ಟು ಬಿಜೆಪಿ ಬೆಂಬಲ ಇದೆ ಎಂದು ಹೇಳಿದ್ದಾರೆ.

2ನೇ ಹಂತದ ಕ್ಷೇತ್ರಗಳಲ್ಲಿ ನಾಮಪತ್ರ ಹಿಂಪಡೆಯುವ ಸಮಯ ಅಂತ್ಯವಾಗಿದ್ದು, ಕೊನೆಯ ದಿನವೂ ಕೆ.ಎಸ್.ಈಶ್ವರಪ್ಪ ನಾಮಪತ್ರ ವಾಪಸ್ ಪಡೆದಿರಲಿಲ್ಲ. ಹೀಗಾಗಿ ಬಂಡಾಯ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿ ಉಳಿದುಕೊಂಡಿದ್ದಾರೆ. ಬಿಜೆಪಿ ಹಿರಿಯ ನಾಯಕರ ಮನವೊಲಿಕೆಗೂ ಜಗ್ಗಿರಲಿಲ್ಲ. ಮೋದಿ ಭಾವಚಿತ್ರ ಬಳಸಿಕೊಂಡು ಈಶ್ವರಪ್ಪ ಪ್ರಚಾರ ನಡೆಸುತ್ತಿದ್ದಾರೆ. ಹಾಗಾಗಿ ಬಿಜೆಪಿಗೆ ತಲೆ ನೋವಾಗಿದ್ದಾರೆ.

ಬಿಎಸ್ ಯಡಿಯೂರಪ್ಪ ಕುಟುಂಬ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದರು. ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಈಶ್ವರಪ್ಪ ಬರುತ್ತಾರೆ ಅಂದರು. ಬಳಿಕ ನಾಮಪತ್ರ ಹಾಕುವುದಿಲ್ಲ ಎಂದಿದ್ದರು. ದಿನಾಂಕ 19ನೇ ಶಾಕಿಂಗ್ ಅಂತಾ ಹೇಳಿದ್ದರು. ಇಂದು ನಾಮಪತ್ರ ವಾಪಸ್​​ಗೆ ಕಡೆ ದಿನ. ಇಂದು ನಾನು ಕಣದಲ್ಲಿದ್ದೇನೆ. ನನಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಬೆಂಬಲವಿದೆ ಎಂದರು.

Nimma Suddi
";