This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics NewsState News

5-ವರ್ಷ ಅಧಿಕಾರ ನಡೆಸಿದ ಕಾಂಗ್ರೆಸ್ ಸರ್ಕಾರ ಏನನ್ನೂ ಮಾಡಲಿಲ್ಲ : ಕುಮಾರಸ್ವಾಮಿ

5-ವರ್ಷ ಅಧಿಕಾರ ನಡೆಸಿದ ಕಾಂಗ್ರೆಸ್ ಸರ್ಕಾರ ಏನನ್ನೂ ಮಾಡಲಿಲ್ಲ : ಕುಮಾರಸ್ವಾಮಿ

ಮಂಡ್ಯ: ಬಿಜೆಪಿ ಮತ್ತು ಜೆಡಿಎಸ್ ನಡುವೆ ಲೋಕಸಭಾ ಚುನಾವಣೆಗಾಗಿ ಮೈತ್ರಿ ಏರ್ಪಟ್ಟ ಬಳಿಕ ಎರಡು ಪಕ್ಷಗಳ ನಾಯಕರು ಒಂದೇ ವೇದಿಕೆಯ ಮೇಲೆ ಕಾಣಿಸಿಕೊಳ್ಳಲಾರಂಭಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಜೆಡಿಎಸ್ ಅಭ್ಯರ್ಥಿಗಾಗಿ ಬಿಜೆಪಿ ಧುರೀಣರು ಮತ್ತು ಬಿಜೆಪಿ ನಾಯಕರ ಪರ ಜೆಡಿಎಸ್ ಮುಖಂಡರು ಪ್ರಚಾರ ಮಾಡುವುದು, ಮತ ಯಾಚಿಸುವುದು ಶುರುವಾಗಿದ್ದು, ಬೆಳಗ್ಗೆ ಮೈಸೂರಲ್ಲಿ ಜಂಟಿ ಕಾರ್ಯಕರ್ತರ ಸಮಾವೇಶ ನಡೆಸಿದ ಬಳಿಕ ಪಕ್ಷಗಳ ನಾಯಕರು ಅತ್ಯಂತ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಲಗ್ಗೆಯಿಟ್ಟರು. ನಗರದಲ್ಲಿ ಮಾಧ್ಯಮಗೋಷ್ಟಿಯೊಂದನ್ನು ಉದ್ದೇಶಿಸಿ ಮಾತಾಡುವಾಗ ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ರಾಮನಗರಕ್ಕೆ ಅವರ ಕೊಡುಗೆ ಏನು ಅಂತ ಕಾಂಗ್ರೆಸ್ ನಾಯಕರು ಕೇಳುತ್ತಿದ್ದಾರೆ ಅಂತ ಪತ್ರಕರ್ತರು ಹೇಳಿದ್ದಕ್ಕೆ ಕೋಪಗೊಂಡರು.

ತಾನು ಅಲ್ಲಿಗೆ ಹೋಗುವ ಮೊದಲು ಜಿಲ್ಲೆ ಹೇಗಿತ್ತು ಈಗ ಹೇಗಿದೆ ಅನ್ನೋದನ್ನು ಅವರು ನೋಡಲಿ, 2006 ರಲ್ಲಿ ತಾನು ಬಿಎಸ್ ಯಡಿಯೂರಪ್ಪನವರ ಜೊತೆ ಸರ್ಕಾರ ಮಾಡಿದಾಗ ರಾಜೀವ್ ಆರೊಗ್ಯ ವಿಶ್ವವಿದ್ಯಾಯಕ್ಕೆ ಚಾಲನೆ ನೀಡಿದ್ದಾಗ್ಯೂ ನಂತರ ಅಧಿಕಾರಕ್ಕೆ ಬಂದು 5-ವರ್ಷ ಅಧಿಕಾರ ನಡೆಸಿದ ಕಾಂಗ್ರೆಸ್ ಸರ್ಕಾರ ಏನನ್ನೂ ಮಾಡಲಿಲ್ಲ ಎಂದ ಕುಮಾರಸ್ವಾಮಿ, ತಮ್ಮ ಬಲಭಾಗದಲ್ಲಿ ಕೂತಿದ್ದ ಅಶ್ವಥ್ ನಾರಾಯಣ ಅವರ ತೊಡೆ ತಟ್ಟಿ, ಇವರು ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಯೋಜನೆ ಕೈಗೆತ್ತಿಕೊಂಡರು ಎಂದರು.

";