This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics NewsState News

ನನ್ನ ತಲೆಯ ಹೇರ್ ಕಟ್ ಮಾಡುವವರು ಫ್ರೀಯಾಗಿಲ್ಲ. ಒಂದು ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಫ್ರೀಯಾಗಿದ್ದರೆ ಬಂದು ಕಟಿಂಗ್ ಮಾಡಲಿ;ಮಧು ಬಂಗಾರಪ್ಪ

ನನ್ನ ತಲೆಯ ಹೇರ್ ಕಟ್ ಮಾಡುವವರು ಫ್ರೀಯಾಗಿಲ್ಲ. ಒಂದು ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಫ್ರೀಯಾಗಿದ್ದರೆ ಬಂದು ಕಟಿಂಗ್ ಮಾಡಲಿ;ಮಧು ಬಂಗಾರಪ್ಪ

ಚಿತ್ರದುರ್ಗ: ನನ್ನ ತಲೆಯ ಹೇರ್ ಕಟ್ ಮಾಡುವವರು ಫ್ರೀಯಾಗಿಲ್ಲ. ಒಂದು ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಫ್ರೀಯಾಗಿದ್ದರೆ ಬಂದು ಕಟಿಂಗ್ ಮಾಡಲಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಟಾಂಗ್ ನೀಡಿದರು.

ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರ ಹಣೆಬರಹ ಜೂನ್ 4ಕ್ಕೆ ಬರುತ್ತದೆ ಆಗ ನೋಡಿಕೊಳ್ಳಲಿ. ನನ್ನ ಹಣಬರಹ ನಾನು ನೋಡಿಕೊಳ್ಳುತ್ತೇನೆ, ತೊಂದರೆಯಿಲ್ಲ. ಇಷ್ಟು ವರ್ಷ ಬಿಜೆಪಿ ಹೊಲಸು ಮಾಡಿದ್ದನ್ನು ನಾವು ಸರಿ ಮಾಡುತ್ತಿದ್ದೇವೆ. ಪಠ್ಯ ಪರಿಷ್ಕರಣೆ ಪ್ರಣಾಳಿಕೆಯಲ್ಲಿ ಹೇಳಿದಂತೆ ಮಾಡಿದ್ದೇವೆ. ಬಿಜೆಪಿ ಹಣೆಬರಹಕ್ಕೆ ಶಿಕ್ಷಕರ‌ ನೇಮಕಾತಿಯನ್ನೂ ಮಾಡಲಾಗಿಲ್ಲ. ನಮ್ಮ ಸರ್ಕಾರ ಬಂದ ಬಳಿಕ ಶಿಕ್ಷಕರ ನೇಮಕಾತಿ ಪೂರ್ಣಗೊಳಿಸಿದ್ದೇವೆ ಎಂದು ಹೇಳಿದರು.

ಸಾಮಾನ್ಯವಾಗಿ ಶಾಲೆಗೆ ಮಕ್ಕಳು ಉತ್ತಮ ಬಟ್ಟೆ ಧರಿಸಿ, ಕೂದಲನ್ನು ಸಣ್ಣದಾಗಿ ಕಟ್ಟಿಂಗ್ ಮಾಡಿಸಿಕೊಂಡು ತಲೆಗೆ ಎಣ್ಣೆ ಹಚ್ಚಿಕೊಂಡು ತಲೆ ಬಾಚಿಕೊಂಡು ಬರುತ್ತಾರೆ. ಆದರೆ, ಸ್ವತಃ ಶಿಕ್ಷಣ ಸಚಿವರೇ ಶಾಲೆಗೆ ಬರುತ್ತಾರೆಂದರೆ ಶಿಕ್ಷಕರು ಅವರಿಗೆ ತಲೆ ಬಾಚಿಕೊಂಡು ಬನ್ನಿ ಎನ್ನುವಂತಾಗಿದೆ. ಜೊತೆಗೆ, ಶಿಕ್ಷಣ ಇಲಾಖೆಯನ್ನು ಹೊಂದಿದ ಶಿಕ್ಷಣ ಸಚಿವರು ವಿಧಾನಸಭೆಗೆ ಬರುವಾಗಲೇ ನೀವು ತಲೆ ಬಾಚಿಕೊಂಡು ಬನ್ನಿ ಎಂದು ಹೇಳುವಂತಹ ಪರಿಸ್ಥಿತಿ ಬಂದಿದೆ. ಅವರಿಗೆ ಕಟ್ಟಿಂಗ್ ಮಾಡಿಸಿಕೊಳಡು ಬರಲು ಹೇಳಬೇಕಿ. ಅವರಿನ್ನೂ ಚಿತ್ರರಂಗದಲ್ಲಿದ್ದೇವೆ ಎಂಬ ಭ್ರಮೆಯಲ್ಲಿದ್ದಾರೆ. ಅದರಿಂದ ಹೊರಬರಬೇಕು ಎಂದು ಟೀಕಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ನನಗೆ ಕಟಿಂಗ್ ಮಾಡುವವರು ಫ್ರೀ ಇಲ್ಲ. ವಿಜಯೇಂದ್ರ ಫ್ರೀಯಿದ್ದರೆ ಬಂದು ಕಟಿಂಗ್ ಮಾಡಲಿ. ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ. ವಿಜಯೇಂದ್ರ ಭ್ರಮೆಯಲ್ಲಿದ್ದಾರೆ. ವಿಜಯೇಂದ್ರ ಅವರ ಅಪ್ಪ ಮುಖ್ಯಮಂತ್ರಿ ಆಗಿದ್ದರೆಂಬ ಭ್ರಮೆಯಲ್ಲಿದ್ದಾರೆ. ಕೂಡಲೇ ವಿಜಯೇಂದ್ರ ಅವರು ಭ್ರಮೆಯಿಂದ ಹೊರ ಬರಬೇಕು. ಬಿಜೆಪಿ ರಾಜ್ಯಾದ್ಯಕ್ಷರಾಗಿ ಏನು ಮಾಡಬೇಕು ಯೋಚಿಸಲಿ. ಚಿತ್ರರಂಗದ ಬಗ್ಗೆ ವಿಜಯೇಂದ್ರ ಮಾತಾಡುವ ಅಗತ್ಯ ಇಲ್ಲ ಎಂದು ಟೀಕೆ ಮಾಡಿದರು.

";