This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಜಗದೀಶ್​​​ ಶೆಟ್ಟರ್​​​ ಬಿಜೆಪಿಗೆ ಹೋಗಿದ್ದಕ್ಕೆ ನಮ್ಮ ಆಕ್ಷೇಪ ಇಲ್ಲ -ಸಚಿವ ಕೆಎನ್ ​ರಾಜಣ್ಣ

ಜಗದೀಶ್​​​ ಶೆಟ್ಟರ್​​​ ಬಿಜೆಪಿಗೆ ಹೋಗಿದ್ದಕ್ಕೆ ನಮ್ಮ ಆಕ್ಷೇಪ ಇಲ್ಲ -ಸಚಿವ ಕೆಎನ್ ​ರಾಜಣ್ಣ

ಹಾಸನ: ಜಗದೀಶ್​​​ ಶೆಟ್ಟರ್​​​ ಬಿಜೆಪಿಗೆ ಹೋಗಿದ್ದಕ್ಕೆ ನಮ್ಮ ಆಕ್ಷೇಪ ಇಲ್ಲ ಎಂದು ಸಹಕಾರ ಸಚಿವ ಕೆ.ಎನ್​ ರಾಜಣ್ಣ ತಿಳಿಸಿದರು.

ಹಾಸನದಲ್ಲಿ ಮಾತನಾಡಿದ ಅವರು ‘ ಶೆಟ್ಟರ್​​ ಬಗ್ಗೆ ಆರೋಪ ಮಾಡುವುದು ಸಾಧುವಲ್ಲ, ಅವರು​​​ ಬಿಜೆಪಿಗೆ ಮರಳಿ ಹೋಗಿದ್ದು ಅವರ ವೈಯಕ್ತಿಕ ನಿರ್ಧಾರ. ಕಾಂಗ್ರೆಸ್​​ನಲ್ಲಿ ನನ್ನ ಚೆನ್ನಾಗಿ ನೋಡಿಕೊಂಡರು ಎಂದು ಶೆಟ್ಟರ್ ಹೇಳಿದ್ದಾರೆ. ​ ಇಲ್ಲಿ ​ಯಾವುದೇ ಅಪಮಾನ, ಅಸಮಾಧಾನ ಆಗಲಿ ಇರಲಿಲ್ಲ ಎಂದು ವಿವರಿಸಿದರು.

ಶೆಟ್ಟರ್​​​ ಮೊದಲಿನಿಂದಲೂ ಆರ್​ಎಸ್​ಎಸ್​ ಸಿದ್ಧಾಂತದಿಂದ ಬಂದವರು. ಅದರ ಮೇಲಿನ ಒಲವಿನಿಂದ ಮತ್ತೆ ಪಕ್ಷಕ್ಕೆ ಹೋಗಿರಬಹುದಿದ್ದು, ಪ್ರಜಾಪ್ರಭುತ್ವದಲ್ಲಿ ಎಲ್ಲರೂ ಸ್ವತಂತ್ರರೂ, ಅದಕ್ಕೆ ನಮ್ಮ ಆಕ್ಷೇಪವಿಲ್ಲ. ಅವರು ವಿಧಾನಸಭೆ ಟಿಕೆಟ್ ಕೊಡಲಿಲ್ಲ ಎಂದು ಬೇಸರದಿಂದ ತೀರ್ಮಾನ ತೆಗೆದುಕೊಂಡಿದ್ದರು. ‘ನಾನು ಕೂಡ ಬೇರೆ ಪಾರ್ಟಿಗೆ ಹೋಗಿದ್ದೆ, ಜನತಾದಳದಲ್ಲಿ‌ 2004 ರಲ್ಲಿ ಇದ್ದೆ. ಅಲ್ಲಿ ಒಗ್ಗದ ಹಿನ್ನಲೆ ವಾಪಸ್ಸು ಕಾಂಗ್ರೆಸ್​ಗೆ ಬಂದೆ. ಹಾಗೆ ಶೆಟ್ಟರ್​ ಕೂಡ ಬಂದರು, ನಾಲ್ಕು ತಿಂಗಳು ಇದ್ದರೂ ಒಗ್ಗಲಿಲ್ಲ ಎಂದು ವಾಪಸ್ಸು ಹೋದರು ಎಂದರು.

ವೇಳೆ ಕಾಂಗ್ರೆಸ್ ಜಗದೀಶ್ ಶೆಟ್ಟರ್​ಗೆ ಮಂತ್ರಿ ಮಾಡದೇ ಅನ್ಯಾಯ ಮಾಡಿತು ಎಂಬ ಹೆಚ್.ಡಿ.ಡಿ ಹೇಳಿಕೆ ವಿಚಾರ ‘ಹಿಂದೆ ಬಸವರಾಜ ಬೊಮ್ಮಾಯಿ ಇದ್ದಾಗ ಯಾಕೆ ಮಂತ್ರಿ ಮಾಡಲಿಲ್ಲ ಅವರಿಗೆ, ನಮ್ಮನ್ನ ಹೇಳೋದಾದ್ರೆ ಅವರ್ಯಾಕೆ ಮಾಡಲಿಲ್ಲ. ಗೌಡ್ರು ಯಾಕೆ ಹೇಳಿ ಮಾಡಿಸಬಾರದಿತ್ತು?. ಸುಮ್ಮನೆ ಯಾವುದೇ ರಾಜಕೀಯದ ಬಣ್ಣಕ್ಕೋಸ್ಕರ, ಅವರ ಬೇಳೆ ಬೇಯಿಸಿಕೊಳ್ಳೋದಕ್ಕೆ ಹೇಳೋದನ್ನ ನಾನು ಒಪ್ಪೋದಿಲ್ಲ ಎಂದು ಹೇಳಿದರು.

";