This is the title of the web page
This is the title of the web page

Live Stream

February 2025
S M T W T F S
 1
2345678
9101112131415
16171819202122
232425262728  

| Latest Version 9.4.1 |

State News

ಕೇಂದ್ರದಿಂದ ‌ಕನ್ನಡಿಗರಿಗೆ ಅನ್ಯಾಯ ಆಗ್ತಾನೇ ಇದೆ: ಸಚಿವ ಪ್ರಿಯಾಂಕ್ ಖರ್ಗೆ

ಕೇಂದ್ರದಿಂದ ‌ಕನ್ನಡಿಗರಿಗೆ ಅನ್ಯಾಯ ಆಗ್ತಾನೇ ಇದೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕೇಂದ್ರ ಬಜೆಟ್ ಬಗ್ಗೆ ನಮ್ಮ ನಿರೀಕ್ಷೆ ಶೂನ್ಯ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೇಂದ್ರದಿಂದ ಉದ್ಯೋಗ ಸೃಷ್ಟಿ ‌ಆಗಿದ್ಯಾ? 10 ಸಾವಿರ ಜನ ಇಸ್ರೇಲ್ ನಲ್ಲಿ‌ಕೆಲಸ ಮಾಡ್ತಿದ್ದಾರೆ ಯಾಕೆ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ರಾಷ್ಟ್ರ ಬಡತನ ರೇಖೆಯಲ್ಲಿ 111 ಸ್ಥಾನದಲ್ಲಿದೆ. ಹಸಿವಿನಲ್ಲಿ 113 ನೇ ಸ್ಥಾನದಲ್ಲಿದೆ. ಭ್ರಷ್ಟಾಚಾರದಲ್ಲಿ 98 ನೇ ಸ್ಥಾನದಲ್ಲಿದೆ. ನಲ್ಲಿ ನಮ್ಮ ನಿರೀಕ್ಷೆ ಶೂನ್ಯ ಎಂದರು.

ಕೇಂದ್ರದಿಂದ ‌ಕನ್ನಡಿಗರಿಗೆ ಅನ್ಯಾಯ ಆಗ್ತಾನೇ ಇದ್ದು, ಜಿಎಸ್ ಟಿ ಮರುಪಾವತಿಯಲ್ಲಿ ಅನ್ಯಾಯವಾಗಿದೆ. ಕಲಬುರಗಿಯಲ್ಲಿ ಕೈಗಾರಿಕೆಗಳನ್ನು ಮಾಡ್ತೇವೆ ಅಂದ್ರು ಆಯ್ತಾ? ಮೋದಿ ಗ್ಯಾರೆಂಟಿಯಲ್ಲಿ 50% ಕನ್ನಡಿಗರ ಬೆವರಿದೆ ಎಂದು ಹೇಳಿದರು.

ಜಲಜೀವನ್ ಮಿಷನ್ ನಲ್ಲಿ 50% ಬೆವರಿದೆ. ಬಿಜೆಪಿಗರು ದೊಡ್ಡ ದೊಡ್ಡ ಮಾತು ಹೇಳುವುದಷ್ಟೇ.ಬಡವರಿಗೆ ಯಾವ ಯೋಜನೆ ತಂದಿದ್ದಾರೆ.ಫೈನಾನ್ಸ್ ಮಿನಿಸ್ಟರ್ ಕನ್ನಡದಿಂದ ಹೋದವರು, ಆದರೆ ಕರ್ನಾಟಕಕ್ಕೆ ಅವರ ಕೊಡುಗೆಯೇನು? ಎಂದು ಪ್ರಶ್ನಿಸಿದ ಅವರು ಕೇಂದ್ರ ಬಜೆಟ್ ವಿರುದ್ಧ ವಾಗ್ದಾಳಿ ನಡೆಸಿದರು.

 

Nimma Suddi
";