This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಮೈಸೂರಿನಲ್ಲಿ ಕಾಡ್ಗಿಚ್ಚಿನಿಂದ 50ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮೈಸೂರಿನಲ್ಲಿ ಕಾಡ್ಗಿಚ್ಚಿನಿಂದ 50ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮೈಸೂರು: ಜಿಲ್ಲೆಯ ನಂಜನಗೂಡಿನ ಹಂಡುವಿನಹಳ್ಳಿ ಗ್ರಾಮದ ಸಾಮಾಜಿಕ ಅರಣ್ಯ ವಲಯದಲ್ಲಿ ಆಕಸ್ಮಿಕ ಬೆಂಕಿ ತಗುಲಿದ್ದು, 50 ಕ್ಕೂ ಹೆಚ್ಚು ಎಕರೆ ಪ್ರದೇಶ ಸುಟ್ಟು ಭಸ್ಮವಾದ ಘಟನೆ ಬೆಳಕಿಗೆ ಬಂದಿದೆ.

ಬೆಂಕಿ ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದು, 150 ಎಕರೆ ಪ್ರದೇಶದಲ್ಲಿ ಈ ಕುರುಚಲು ಅರಣ್ಯ ಪ್ರದೇಶ ಇದ್ದು, ಅಕ್ರಮವಾಗಿ ಮಣ್ಣು ಸಾಗಾಟ ಮಾಡುವ ಲ್ಯಾಂಡ್ ಮಾಫಿಯ ಕಿಡಿಗೇಡಿಗಳಿಂದ ಈ ಕೃತ್ಯ ನಡೆದಿದೆ ಎಂದ ಆರೋಪ ಕೇಳಿಬಂದಿದ್ದು, ನಂಜನಗೂಡು ಪಟ್ಟಣ ಮೈಸೂರು ಸೇರಿದಂತೆ ಕೇರಳ ರಾಜ್ಯಕ್ಕೆ ಈ ಪ್ರದೇಶದ ವ್ಯಾಪ್ತಿಯಲ್ಲಿ ನಿರಂತರವಾಗಿ ಅಕ್ರಮ ಮಣ್ಣು ಸಾಗಾಟವಾಗುತ್ತಿರುವ ಬಗ್ಗೆ ದೂರು ಕೂಡ ದಾಖಲಿಸಲಾಗಿದೆ.

ಜೊತೆಗೆ ಈ ಕುರುಚಲು ಅರಣ್ಯ ಪ್ರದೇಶವು, ಅತಿ ಹೆಚ್ಚು ಜಿಂಕೆ ಮತ್ತು ನವಿಲುಗಳ ತಾಣ ಎಂದು ಪ್ರಸಿದ್ಧಿ ಪಡೆದಿದೆ. ಹೀಗಿರುವಾ ಅರಣ್ಯ ಇಲಾಖೆ ಇತ್ತ ಗಮನಹರಿಸಬೇಕಿತ್ತು. ಆದರೆ, ಬೆಂಕಿ ಬಿದ್ದರೂ ಕೂಡ ಅದನ್ನು ನಂದಿಸುವಲ್ಲಿ ನಂಜನಗೂಡು ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿರುವ ಆರೋಪ ಕೇಳಿಬಂದಿದೆ.

ಇದೇ ಫೆ.04 ರಂದು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೋಣನೂರು ಮತ್ತು ಚುಂಚನಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿತ್ತು. ಜೊತೆಗೆ ಅರಣ್ಯ ಪ್ರದೇಶದ ಒಂದಷ್ಟು ಭಾಗ ಸುಟ್ಟು ಹೋಗಿತ್ತು, ಬೆಂಕಿಯಿಂದ ನೂರಾರು ಎಕರೆ ಪ್ರದೇಶ ಭಸ್ಮವಾಗಿತ್ತು. ದನ-ಕರುಗಳು ಮತ್ತು ಕಾಡು ಪ್ರಾಣಿಗಳ ಆಹಾರವಾಗಿದ್ದ ಪ್ರದೇಶ ಸುಟ್ಟು ಕರಕಲಾಗಿತ್ತು. ಇದರ ಬೆನ್ನಲ್ಲೇ ಇದೀಗ ನಂಜನಗೂಡಿನ ಹಂಡುವಿನಹಳ್ಳಿ ಗ್ರಾಮದ ಸಾಮಾಜಿಕ ಅರಣ್ಯ ವಲಯದಲ್ಲಿ ಆಕಸ್ಮಿಕ ಬೆಂಕಿ ತಗುಲಿದೆ ಎಂದು ಮಾಹಿತಿ ಕಂಡು ಬಂದಿದೆ.

";