This is the title of the web page
This is the title of the web page

Live Stream

October 2024
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Local NewsNational NewsState News

ಮಹಾಕೂಟದಲ್ಲಿ ಸ್ವಚ್ಚತಾ ಕಾರ್ಯಕ್ಕೆ ಸಂಸದ ಗದ್ದಿಗೌಡರ ಚಾಲನೆ

ಮಹಾಕೂಟದಲ್ಲಿ ಸ್ವಚ್ಚತಾ ಕಾರ್ಯಕ್ಕೆ ಸಂಸದ ಗದ್ದಿಗೌಡರ ಚಾಲನೆ

ಬಾಗಲಕೋಟೆ :

ದಕ್ಷಿಣ ಕಾಶಿ ಎಂದೇ ಪ್ರಸಿದ್ದಿ‌ಪಡೆದ ಮಹಾಕೂಟದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ ಚಾಲನೆ ನೀಡಿದರು.

ಜಿಲ್ಲಾ ಪಂಚಾಯತ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ಹಮ್ಮಿಕೊಂಡ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.

ದೇವಸ್ಥಾನದ ಸುತ್ತಮುತ್ತಲಿನ ಆವರಣ, ಪ್ರಸಾದ ನಿಲಯ ಸುತ್ತಮುತ್ತಲಿನ ಆವರಣ, ಪುಷ್ಕರಣಿಗಳ ಸುತ್ತಮುತ್ತಲಿನ ಸ್ವಚ್ಛತೆ, ಮುಖ್ಯ ರಸ್ತೆಗಳ ಸ್ವಚ್ಛತೆ ಮುಂತಾದವುಗಳ ಸ್ವಚ್ಛತೆ ಕೈಕೊಳ್ಳಲಾಯಿತು. ದೇವಾಲಯಗಳ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.

ಸ್ವಚ್ಛತಾ ಅಭಿಯಾನದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ‌ ಕುರೇರ, ಉಪ ಕಾರ್ಯದರ್ಶಿ ಅಮರೇಶ ನಾಯಕ, ಯೋಜನಾ ನಿರ್ದೇಶಕ ಎನ್.ವಾಯ್.ಬಸರಿಗಿಡದ, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ, ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ ಸೇರಿದಂತೆ ಬಾದಾಮಿ ಮತ್ತು ಗುಳೇದಗುಡ್ಡ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ನಂದಿಕೇಶ್ವರ ಗ್ರಾಮ ಪಂಚಾಯಿತಿಯ ಚುನಾಯಿತ ಪ್ರತಿನಿಧಿಗಳು, ಪಿಡಿಒ ಹಾಗೂ ಸಿಬ್ಬಂದಿ ವರ್ಗ, ಗ್ರಾಮದ ಹಿರಿಯರು, ಮುಖ್ಯಸ್ಥರು, ಶಾಲಾ ಮಕ್ಕಳು, ಎಸ್ ಬಿ ಎಂ ಜಿಲ್ಲಾ ಸಮಾಲೋಚಕರು ಹಾಗೂ ಎನ್ ಆರ್ ಎಲ್ ಎಮ್ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

";