This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ಫೆ.24, 25ಕ್ಕೆ ಬೆಂಗಳೂರಿನಲ್ಲಿ ರಾಷ್ಟ್ರೀಯ ಐಕ್ಯತಾ ಸಮಾವೇಶ -ಸಿಎಂ ಸಿದ್ದು

ಫೆ.24, 25ಕ್ಕೆ ಬೆಂಗಳೂರಿನಲ್ಲಿ ರಾಷ್ಟ್ರೀಯ ಐಕ್ಯತಾ ಸಮಾವೇಶ -ಸಿಎಂ ಸಿದ್ದು

ಬೆಂಗಳೂರು: ಫೆ.24, 25ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಫೆ.24ರಂದು ಉದ್ಘಾಟನೆ, ಫೆ.25ರಂದು ಮಾಡಲಾಗುವುದು ಭಾರತದ ಸಂವಿಧಾನ ಜಾರಿಯಾಗಿ 75 ವರ್ಷ ಆಗಿದ್ದು, ಜನವರಿ 26ರಿಂದ 31 ಜಿಲ್ಲೆಗಳಲ್ಲೂ ಸಂವಿಧಾನ ಜಾಥಾ ಕಾರ್ಯಕ್ರಮ ನಡೆಯುತ್ತಿದ್ದು, ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವ ಕೆಲಸ ಆಗ್ತಿದೆ ಭಾರತ ಸಂವಿಧಾನ ಹಾಗೂ ಐಕ್ಯತಾ ಸಮಾವೇಶ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ಭಾರತದ ಸಂವಿಧಾನ ಜಾರಿಗೆ ಬಂದು 75 ವರ್ಷಕ್ಕೆ ಕಾಲಿಟ್ಟಿದೆ ಎಂದರು.

ಅಮೃತ ಉತ್ಸವದ ಕಾರ್ಯಕ್ರಮವನ್ನ ಅರ್ಥಪೂರ್ಣವಾಗಿ ಆಚರಿಸಬೇಕೆಂದು ತೀರ್ಮಾನ ಮಾಡಿದ್ದೇವೆ. 31 ಜಿಲ್ಲೆಗಳಲ್ಲಿ ಸಂವಿಧಾನ ಜಾಥಾ ಮಾಡುವ ಕಾರ್ಯಕ್ರಮವನ್ನು ಜನವರಿ 26 ರಿಂದ ಹಮ್ಮಿಕೊಳ್ಳಲಾಗಿದೆ. ಇದೇ ತಿಂಗಳ 25ರಂದು ಕೊನೆಯಾಗುತ್ತೆ. ಫೆ.24, 25 ರಾಷ್ಟ್ರೀಯ ಐಕ್ಯತಾ ಸಮಾವೇಶ ಬೆಂಗಳೂರಿನಲ್ಲಿ ನಡೆಯುತ್ತೆ ಎಂದು ತಿಳಿಸಿದರು.

ಪ್ರೊ, ಅಶುತೋಷ್, ಪ್ರಶಾಂತ್ ಭೂಷಣ್, ಮೇದಾ ಪಾಟ್ಕರ್ ಸೇರಿದಂತೆ ಅನೇಕ ಮೇದಾವಿಗಳು ಭಾಗವಹಿಸ್ತಿದ್ದು, ಜನರ ಭಾವನೆಗಳು, ಸಂವಿಧಾನದ ಬಗ್ಗೆ ಬೆಳಕು ಚೆಲ್ಲುವ ಕೆಲಸ ಮಾಡ್ತಾರೆ. 24ರಂದು ರಾಷ್ಟ್ರೀಯ ಐಕ್ಯತಾ ಸಮಾವೇಶ ಉದ್ಘಾಟನೆಯಾಗಲಿದ್ದು, 25ರಂದು ದೊಡ್ಡ ರ್ಯಾಲಿ ಮಾಡಲಾಗುತ್ತೆ. ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವ ಕೆಲಸ ಆಗ್ತಿದೆ. ಬಜೆಟ್ ಪುಸ್ತಕದ ಮೊದಲ‌ ಮುಖ ಪುಟದಲ್ಲಿ ಪ್ರಿಯಾಂಬಲ್ ಉಲ್ಲೇಖಮಾಡಲಾಗಿದೆ ಎಂದು ಸೂಚಿಸಿದರು.

Nimma Suddi
";