ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು ಬೆಳಂ ಬೆಳಗ್ಗೆ ಶನಿವಾರದಂದು ದಿಢೀರ್ ಭೇಟಿ ನೀಡಿದರು.
ಇಳಕಲ್ ನಗರದ ವಾಲ್ಮೀಕಿ ಸರ್ಕಲ್ ಹತ್ತಿರವಿರುವ ಸಮಾಜ ಕಲ್ಯಾಣ ಇಲಾಖೆ ವಸತಿನಿಲಯಕ್ಕೆ
ಮತ್ತು ಕಂದಗಲ್ ರಸ್ತೆಯ ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಗಳಿಗೆ ಭೇಟಿನೀಡಲಾಯಿತು.
ವಸತಿ ನಿಲಯದಲ್ಲಿ ಯಾವುದೇ ರೀತಿಯ ಮಕ್ಕಳ ರಕ್ಷಣಾ ನೀತಿ ಅಳವಡಿಸಿಕೊಳ್ಳದೆ ಇರುವುದು , ಹಾಗೂ ಸರಿಯಾದ ರೀತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸದೆ ಇರುವದು , ದಾಸ್ತಾನು ಸಂಗ್ರಹ ದಾಖಲಾತಿ ಪುಸ್ತಕದಲ್ಲಿ ವ್ಯತ್ಯಾಸ ಕಂಡುಬಂದಿತು,
ಇದರ ಕುರಿತು ಅಲ್ಲೇ
ಹಾಜರಿದ್ದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ಶಿಸ್ತು ಕ್ರಮ ಕೈಗೊಳ್ಳಲು ಸೂಚಿಲಾಗಿದೆ, ಹಾಗೆ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿಗಳಿಗೂ ಶಿಸ್ತು ಕ್ರಮಕ್ಕೆ ಜರುಗಿಸಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ರಾಮತ್ನಾಳ ಮಾಧ್ಯಮದವರಿಗೆ ತಿಳಿಸಿದರು.
ವರದಿಗಾರರು ; ಶರಣಗೌಡ ಕಂದಕೂರ