This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics NewsState News

ಹೊಸ ಭಾರತದ ನಿರ್ಮಾಣ ನಮ್ಮ ಗುರಿ

ಹೊಸ ಭಾರತದ ನಿರ್ಮಾಣ ನಮ್ಮ ಗುರಿ

ಬಾಗಲಕೋಟೆ

ನವ ಪೀಳಿಗೆಗಾಗಿ ಹೊಸ ಭಾರತ ನಿರ್ಮಾಣದ ಗುರಿ ನಮ್ಮದಾಗಿದ್ದು ಜಗತ್ತಿನ ಕಣ್ಣು ಭಾರತದತ್ತ ಇದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.

ನಗರದಲ್ಲಿನ ಶಿವಾನಂದ ಜೀನ್‌ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ರಾಷ್ಟç ದ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸಹಸ್ರಾರು ಜನರ ಬಲಿದಾನದಿಂದ ನಮಗೆ ಸ್ವಾತಂತ್ರö್ಯ ದೊರೆತಿದೆ. ಅವರೆಲ್ಲರು ನಮಗೆ ಸದಾಕಾಲ ಸ್ಮರಣಿಯರು. ಪ್ರಧಾನಿ ಮೋದಿಯವರು ಭಾರತದ ಸರ್ವಾಂಗೀಣ ಅಭಿವೃದ್ಧಿ ಮಾಡುತ್ತಿದ್ದಾರೆ, ಆ ನಿಟ್ಟಿನಲ್ಲಿ ಇಡಿ ಜಗತ್ತು ಭಾರತದತ್ತ ತಿರುಗಿ ನೋಡುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ ವೀರಣ್ಣ ಚರಂತಿಮಠ, ಪ್ರಧಾನಿ ಮೋದಿಯವರು ಕಾಶ್ಮೀರದಲ್ಲಿ ೩೭೦ನೇ ಕಲಂ ತೆಗೆದು ಹಾಕಿ ಅಲ್ಲಿ ಶಾಂತಿ ನೆಲೆಸುವಂತೆ ಮಾಡಿದರು. ಮುಂದಿನ ದಿನಗಳಲ್ಲಿ ಪಾಕ್ ಆಕ್ರಮಿತ ಕಾಶ್ಮೀರ ಭಾರತದಲ್ಲಿ ವಿಲೀನಗೊಳ್ಳುವ ಸಾಧ್ಯತೆಯಿದೆ. ನನೆಗುದಿಗೆ ಬಿದ್ದಿದ್ದ ಅಯೋಧ್ಯಾ ರಾಮಮಂದಿರ ನಿರ್ಮಾಣಗೊಳ್ಳುತ್ತಿದೆ ಮುಂಬರುವ ಚುನಾವಣೆಯಲ್ಲಿ ಬಾಗಲಕೋಟೆಯಿಂದ ಸಂಸದರನ್ನು ಗೆಲ್ಲಿಸಿ ಕೊಡುವುದರ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸೋಣ ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ಅಶೋಕ ಲಿಂಬಾವಳಿ, ರಾಜು ನಾಯ್ಕರ, ರಾಜು ರೇವಣಕರ, ಬಸವರಾಜ ಯಂಕAಚಿ, ಸತ್ಯನಾರಾಯಣ ಹೇಮಾದ್ರಿ, ಸದಾನಂದ ನಾರಾ, ಶಿವಾನಂದ ಟವಳಿ, ಜ್ಯೋತಿ ಭಜಂತ್ರಿ, ಶೋಭಾರಾವ್, ಶಶಿಕಲಾ ಮಜ್ಜಗಿ, ಸುರೇಶ ಕೊಣ್ಣರು, ಬಸವರಾಜ ಹುನಗುಂದ, ಉಮೇಶ ಹಂಚಿನಾಳ ಇತರರು ಇದ್ದರು.

 

 

";