This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Politics NewsState News

ಮೇ 1 ರಂದು ನಮ್ಮ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ನಿರಂಜನ ಅವರ ಮನೆಗೆ ಭೇಟಿ ನೀಡಲಿದ್ದಾರೆ: ಮುರಗೇಶ್ ನಿರಾಣಿ

ಮೇ 1 ರಂದು ನಮ್ಮ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ನಿರಂಜನ ಅವರ ಮನೆಗೆ ಭೇಟಿ ನೀಡಲಿದ್ದಾರೆ: ಮುರಗೇಶ್ ನಿರಾಣಿ

ಹುಬ್ಬಳ್ಳಿ: ಮೇ 1 ರಂದು ನಮ್ಮ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ನಿರಂಜನ ಅವರ ಮನೆಗೆ ಭೇಟಿ ನೀಡಲಿದ್ದು, ನೇಹಾ ಕುಟುಂಬಸ್ಥರಿಗೆ ಸಾಂತ್ವನ ಮಾಡಲಿದ್ದಾರೆ ಎಂದು ಮಾಜಿ ಸಚಿವ ಮುರಗೇಶ್ ನಿರಾಣಿ ತಿಳಿಸಿದರು.

ನಗರದ ನೇಹಾ ಹಿರೇಮಠ ಅವರ ಮನೆಗೆ ಭೇಟಿ ನೀಡುವ ಮೂಲಕ ನಿರಂಜನ ಹಾಗೂ ತಾಯಿ ಗೀತಾ ಹಿರೇಮಠ ಅವರಿಗೆ ಸಾಂತ್ವನ ಹೇಳಿದ್ದು, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆಯನ್ನು ನಾನು ಖಂಡಿಸಿಸುತ್ತೇನೆ. ಅಮಿತ್ ಶಾ ಅವರು ಬಂದಾಗ ಈ ಬಗ್ಗೆ ಚರ್ಚೆ ಮಾಡಿ ಮುಂದಿನ ತನಿಖೆ ಬಗ್ಗೆ ಹೇಗೆ ಎನ್ನುವುದನ್ನು ತಿಳಿಸುತ್ತೇವೆ ಎಂದು ಹೇಳಿದರು.

ಕಾಲೇಜ್ ಕ್ಯಾಂಪಸ್ ಒಳಗೆ ಇಂತಹ ಘಟನೆಗಳು ಮುಂದೆ ಆಗಬಾರದು ಅದಕ್ಕೆ ಸ್ಪೆಷಲ್ ಆ್ಯಕ್ಟ್ ತರಬೇಕು. ಆವಾಗ ಇಂತಹ ಘಟನೆಗಳಿಗೆ ಕಡಿವಾಣ ಹಾಕಬಹುದು. ನಿರಂಜನ ಅವರು ಕಾಂಗ್ರೆಸ್ ಕಾರ್ಪೊರೇಟರ್​ ಇದ್ದಾರೆ. ಅವರಿಗೆ ನಾವು ಸಾಂತ್ವನ ಹೇಳೋದು ಹೇಗೆ ರಾಜಕಾರಣ ಆಗುತ್ತೆ. ಇಂತಹ ಘಟನೆಗಳು ನಡೆದಾಗ ಎಲ್ಲರೂ ಬಂದು ಸಾಂತ್ವನ ಹೇಳುತ್ತಾರೆ ಆದರೆ ಇದನ್ನ ಕಾಂಗ್ರೆಸ್ ರಾಜಕಾರಣ ಅಂತ ಶಬ್ದ ಬಳಸಬಾರದು. ನೇಹಾಗೆ ಆದಂತಹ ಘಟನೆ ಇನ್ನೊಬ್ಬರಿಗೆ ಆಗಬಾರದು ಅನ್ನೋದು ನಮ್ಮ ಬೇಡಿಕೆ ಎಂದರು.

ಘಟನೆ ಆದ ನಂತರ ಹತ್ಯೆಯ ಸಾಧಕ ಬಾಧಕಗಳ ಬಗ್ಗೆ ವಿಚಾರ ಮಾಡಿ ಸಿಎಂ ಸಿದ್ದರಾಮಯ್ಯ ಮತ್ತು ಗೃಹಸಚಿವರು ಹೇಳಿಕೆ ನೀಡಬೇಕಿದ್ದು, ನಂತರ ಅವರ ಮನೆಗೆ ಬಂದು ಸಾಂತ್ವನ ಹೇಳಿ ಕ್ಷಮೆಯಾಚಿಸಿದ್ದಾರೆ. ಸಿಐಡಿ ಅಧಿಕಾರಿಗಳು ಪಕ್ಷಾತೀತವಾಗಿರುತ್ತಾರೆ. ನ್ಯಾಯ ಕೊಡಿಸುವ ದೃಷ್ಟಿಯಿಂದಲೇ ಸಿಎಂ ಅವರು ಸಿಐಡಿಗೆ ವಹಿಸಿದ್ದಾರೆ. ಹಾಗಾಗಿ ಯಾರಿಗೂ ಇದರಲ್ಲಿ ಹಸ್ತಕ್ಷೇಪ ಮಾಡುವ ಉದ್ದೇಶವಿರೋದಿಲ್ಲ.

ಹತ್ಯೆ ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು. ಈ ಕುಟುಂಬಕ್ಕೆ ನ್ಯಾಯ ಸಿಗಬೇಕು. ತಾಯಿ ಮುಂದೆಯೇ ಈ ರೀತಿ ಹತ್ಯೆ ಆಗುತ್ತೆ ಅಂದರೆ ಆ ಕುಟುಂಬಕ್ಕೆ ಎಷ್ಟು ನೋವು ಆಗಿರಬೇಕು. ಹತ್ಯೆ ಮಾಡಿರುವ ಯುವಕ ಬಗ್ಗೆ ತನಿಖೆ ಮಾಡುತ್ತಿರುವ ಅಧಿಕಾರಿಗಳು ಮಾಹಿತಿ ಕಲೆ ಹಾಕಬೇಕು. ಆತನ ಹಿಂದೆ ಯಾರು ಇದ್ದಾರೆ ಯಾರ ಕೈವಾಡವಿದೆ ಅನ್ನೋದನ್ನ ತನಿಖೆ ನಡೆಸಬೇಕು. ಹತ್ಯೆಗೆ ಯಾರು ಪ್ರೇರಣೆ ಕೊಟ್ಟಿದ್ದಾರೆ ಅವರಿಗೂ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

Nimma Suddi
";