This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

State News

ಬಿಜೆಪಿಯವರು ಹೇಳುತ್ತಿರುವುದು ಸುಳ್ಳು ಎಂಬುದು ಜನರಿಗೂ ಅರ್ಥವಾಗಿದೆ: ಸಿಎಂ ಸಿದ್ದರಾಮಯ್ಯ

ಬಿಜೆಪಿಯವರು ಹೇಳುತ್ತಿರುವುದು ಸುಳ್ಳು ಎಂಬುದು ಜನರಿಗೂ ಅರ್ಥವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿಯವರು ಹೇಳುತ್ತಿರುವುದು ಸುಳ್ಳು ಎಂಬುದು ಜನರಿಗೂ ಅರ್ಥವಾಗಿದೆ. ಬಿಜೆಪಿ ಸುಳ್ಳಿನ ಪಕ್ಷ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸಭೆಯ ಬಜೆಟ್​ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿ ಮಂಗಳವಾರ ಮಾತನಾಡಿದ ಅವರು, ನಾವು ರಾಜ್ಯಪಾಲರಿಂದ ಸುಳ್ಳು ಹೇಳಿಸಿದ್ದೇವೆ ಎಂಬುದಾಗಿ ಬಿಜೆಪಿಯವರು ಆರೋಪ ಮಾಡಿದ್ದು, ರಾಜ್ಯಪಾಲರ ಭಾಷಣ ನೀರಸ ಭಾಷಣ ಎಂದು ಆರೋಪಿಸಿದ್ದಾರೆ.

ರಾಜ್ಯಪಾಲರು ಒಳ್ಳೆಯವರು. ಅವರ ಬಾಯಿಂದ ನೀವು ಏನೇನೋ ಹೇಳಿಸಿದ್ದೀರಿ ಎಂದು ಮಾಜಿ ಸಿಎಂ ಬೊಮ್ಮಾಯಿ ಆರೋಪಿಸಿದ್ದಾರೆ. ಆದರೆ, ರಾಜ್ಯಪಾಲರು ಸತ್ಯವನ್ನೇ ಹೇಳಿದ್ದು, ಅವರು ಸುಳ್ಳು ಹೇಳಿಲ್ಲ ಎಂದು ಪ್ರತಿಪಾದಿಸಿದರು.ಬಿಜೆಪಿಯವರು ಹೇಳುತ್ತಿರುವುದು ಸುಳ್ಳು ಅಂತ ಜನರಿಗೆ ಅರ್ಥವಾಗಿದೆ. ಬಿಜೆಪಿ ಸುಳ್ಳಿನ ಪಕ್ಷ ಎಂದು ಟೀಕಿಸಿದರು.

ಇದೇ ವೇಳೆ, ಮಧ್ಯ ಪ್ರವೇಶಿಸಿದ ಬೊಮ್ಮಾಯಿ, ನಮ್ಮದು ಸುಳ್ಳಿನ ಪಕ್ಷವಾದ್ರೆ, ಕಾಂಗ್ರೆಸ್ ಏನು ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾನು ನಿಮ್ಮನ್ನು ಕೆಣಕಲು ಹೋಗಲ್ಲ. ನಾವೇನು ಅಂತ ಜನ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಎಂದರು.

ಕೇಂದ್ರ ಸರ್ಕಾರಕ್ಕೆ 17 ಪತ್ರಗಳನ್ನು ಬರೆದಿದ್ದೆವು. ಅದರಲ್ಲಿ ಒಂದು ಪತ್ರಕ್ಕೆ ಮಾತ್ರ ಅಮಿತ್ ಶಾ, ‘ನಿಮ್ಮ ಪತ್ರ ತಲುಪಿದೆ’ ಎಂದು ಉತ್ತರಿಸಿದ್ದರು. ಬೇರೆ ಯಾವ ಪತ್ರಗಳಿಗೂ ಉತ್ತರ ನೀಡಿಲ್ಲ ಎಂದು ಹೇಳಿದರು.