This is the title of the web page
This is the title of the web page

Live Stream

March 2025
S M T W T F S
 1
2345678
9101112131415
16171819202122
23242526272829
3031  

| Latest Version 9.4.1 |

State News

ಹಿಂದುಳಿದ, ದಲಿತ ಮತ್ತು ಶೋಷಿತ ಸಮುದಾಯಗಳ ಜನ ತಮ್ಮ ಶತ್ರು ಯಾರು ಎನ್ನುವುದನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು: ಸಿ.ಎಂ ಸಿದ್ದು

ಹಿಂದುಳಿದ, ದಲಿತ ಮತ್ತು ಶೋಷಿತ ಸಮುದಾಯಗಳ ಜನ ತಮ್ಮ ಶತ್ರು ಯಾರು ಎನ್ನುವುದನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು: ಸಿ.ಎಂ ಸಿದ್ದು

ಚಿತ್ರದುರ್ಗ: ಹಿಂದುಳಿದ, ದಲಿತ ಮತ್ತು ಶೋಷಿತ ಜಾತಿ ಸಮುದಾಯಗಳ ಜನ ತಮ್ಮ ಶತ್ರು ಯಾರು ಎನ್ನುವುದನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಶತ್ರುಗಳನ್ನು ಸ್ಪಷ್ಟವಾಗಿ ಗುರುತಿಸಬೇಕಿದ್ದು, ಸಂಪೂರ್ಣವಾಗಿ ತಿರಸ್ಕರಿಸಿ ನಿಮ್ಮ ಸ್ವಾಭಿಮಾನ ಬೆಳೆಸಿಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಕರ್ನಾಟಕ ಶೋಷಿತ ಜಾತಿ-ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಚಿತ್ರದುರ್ಗದಲ್ಲಿ ಆಯೋಜಿಸಿದ್ದ “ಶೋಷಿತರ ಜಾಗೃತಿ ಸಮಾವೇಶವನ್ನು” ಉದ್ಘಾಟಿಸಿ ಮಾತನಾಡಿದ ಅವರು, ಜಾತಿ ಹೆಸರಲ್ಲಿ ಸಮಾಜವನ್ನು ಛಿದ್ರಗೊಳಿಸುವ ಸಂವಿಧಾನ ವಿರೋಧಿ BJP-RSS ಅನ್ನು ತಿರಸ್ಕರಿಸಿ ಎಂದರು.

ಹಿಂದುಳಿದ, ದಲಿತ ಮತ್ತು ಶೋಷಿತ ಜಾತಿ ಸಮುದಾಯಗಳ ಜನ ತಮ್ಮ ಶತ್ರು ಯಾರು ಎನ್ನುವುದನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಶತ್ರುಗಳನ್ನು ಸ್ಪಷ್ಟವಾಗಿ ಗುರುತಿಸಬೇಕು. ಅವರನ್ನು ಸಂಪೂರ್ಣವಾಗಿ ತಿರಸ್ಕರಿಸಿ ನಿಮ್ಮ ಸ್ವಾಭಿಮಾನ ಬೆಳೆಸಿಕೊಳ್ಳಿ ಎಂದು ಸೂಚಿಸಿದರು.ಮಂಡಲ್ ವರದಿಯನ್ನು ಬಿಜೆಪಿ ಮತ್ತು RSS ವಿರೋಧಿಸುತ್ತಲೇ ಬಂದಿದೆ ಎಂದು ಹೇಳಿದರು.

ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳನ್ನು BJP-RSS ನಿರಂತರವಾಗಿ ವಿರೋಧಿಸುತ್ತಲೇ ಇದ್ದು, ಆದ್ದರಿಂದ ಸಂವಿಧಾನ ಮತ್ತು ಮೀಸಲಾತಿ ಹಾಗೂ ಸಾಮಾಜಿಕ ನ್ಯಾಯದ ವಿರೋಧಿಗಳ ಕೈಗೆ ಅಧಿಕಾರ ಹೋಗಬಾರದು ಎಂದು ಅಂಬೇಡ್ಕರ್ ಎಚ್ಚರಿಸಿ, ಈ ಎಚ್ಚರಿಕೆಯನ್ನು ನಾವು ಮರೆಯಬಾರದು ಎಂದು ವಿವರಿಸಿದರು.

Nimma Suddi
";