This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಹತಾಶರಾಗಿರುವುದನ್ನು ರಾಜ್ಯದ ಜನತೆ ಗಮನಿಸುತ್ತಿದೆ: ಆರ್ ಅಶೋಕ

ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಹತಾಶರಾಗಿರುವುದನ್ನು ರಾಜ್ಯದ ಜನತೆ ಗಮನಿಸುತ್ತಿದೆ: ಆರ್ ಅಶೋಕ

ಬೆಂಗಳೂರು: ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಹತಾಶರಾಗಿರುವುದನ್ನು ರಾಜ್ಯದ ಜನತೆ ಗಮನಿಸುತ್ತಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಸಿಗದಿರುವುದು ಆಲ್ಮೋಸ್ಟ್ ಖಚಿತವಾಗಿದ್ದು ವರಿಷ್ಠರು ಹಿಂದಿನ ಒಡೆಯರ್ ಅರಸೊತ್ತಿಗೆಯ ಪ್ರತಿನಿಧಿ ಯದುವೀರ್ ಕೃಷ್ಣದತ್ ಒಡೆಯರ್ ಅವರಿಗೆ ನೀಡಲು ತೀರ್ಮಾನ ತೆಗೆದುಕೊಂಡಂತಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ ತಿಳಿಸಿದರು.

ಇಂದು ಬೆಂಗಳೂರಲ್ಲಿ ವರದಿಗಾರನೊಂದಿಗೆ ಮಾತಾಡಿದ ಅವರು, ಅಧಿಕೃತವಾಗಿ ಇದುವರೆಗೆ ಯಾವುದೂ ದೃಢಪಟ್ಟಿಲ್ಲ. ಟಿಕೆಟ್ ಹಂಚಿಕೆ ಇನ್ನೂ ದೃಢಪಡದ ಕಾರಣ ಪ್ರತಾಪ್ ಸಿಂಹ ಧೃತಿಗೆಡುವ ಅಗತ್ಯವಿಲ್ಲ, ಅವರು ಕೊನೆವರೆಗೆ ತಾಳ್ಮೆ ಪ್ರದರ್ಶಿಸಬೇಕು, ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂದು ಹೇಳಿದರು.

ಯದುವೀರ್ ಅವರಿಗೆ ಟಿಕೆಟ್ ನೀಡುವ ಬಗ್ಗೆ ತನಗೆ ಮಾಹಿತಿ ಇಲ್ಲ ಮತ್ತು ತಾನು ಅವರಿಗೆ ಫೋನ್ ಕೂಡ ಮಾಡಿಲ್ಲ ಎಂದು ಅಶೋಕ ಹೇಳಿದರು. ಟಿಕೆಟ್ ಯಾರಿಗೆ ಸಿಕ್ಕರೂ ಜಿಲ್ಲಾ ಘಟಕದ ಕಾರ್ಯಕರ್ತರೆಲ್ಲ ಅವರ ಪರವಾಗಿ ಕೆಲಸ ಮಾಡಲಿದ್ದಾರೆ ಎಂದು ಮೈಸೂರು ಜಿಲ್ಲಾಧ್ಯಕ್ಷರು ಹೇಳಿದ್ದಾರೆ ಮತ್ತು ಪ್ರತಾಪದ ಸಿಂಹ ಸಹ ಅಭ್ಯರ್ಥಿಯ ಕರಪತ್ರಗಳನ್ನು ಹಂಚುವುದಾಗಿ ಹೇಳಿದ್ದಾರೆ ಎಂದು ಆಶೋಕ ತಿಳಿಸಿದರು.

";