This is the title of the web page
This is the title of the web page

Live Stream

March 2025
S M T W T F S
 1
2345678
9101112131415
16171819202122
23242526272829
3031  

| Latest Version 9.4.1 |

Politics NewsState News

ಟಿಕೆಟ್​ಗಾಗಿ ಸುಧಾಕರ್​​​ ಅವರಿವರ ಕಾಲಿಗೆ ಬೀಳುತ್ತಿದ್ದಾನೆ-ಪ್ರದೀಪ್ ಈಶ್ವರ್

ಟಿಕೆಟ್​ಗಾಗಿ ಸುಧಾಕರ್​​​ ಅವರಿವರ ಕಾಲಿಗೆ ಬೀಳುತ್ತಿದ್ದಾನೆ-ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ: ಡಾ.ಕೆ.ಸುಧಾಕರ್ ಒಬ್ಬ ಅಯೋಗ್ಯ. ಕಾಂಗ್ರೆಸ್​ ಟಿಕೆಟ್​ಗಾಗಿ ಅವರಿವರ ಕಾಲಿಗೆ ಬೀಳುತ್ತಿದ್ದಾನೆ ಎಂದು ಮಾಜಿ ಸಚಿವ ಸುಧಾಕರ್​ ವಿರುದ್ಧ ಶಾಸಕ ಪ್ರದೀಪ್​ ಈಶ್ವರ್ ವಾಗ್ದಾಳಿ ನಡೆಸಿದರು.

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಎಂಪಿ ಟಿಕೆಟ್ ಮಿಸ್ ಆದ್ರೆ, ಕಾಂಗ್ರೆಸ್​ನಿಂದ ಬೆಂಗಳೂರು ಉತ್ತರದಲ್ಲಿ ಸ್ಪರ್ಧೆಗೆ ಸುಧಾಕರ್ ಯತ್ನ ಮಾಡ್ತಿದ್ದು, ಬೆಂಗಳೂರು ಉತ್ತರದ ಕಾಂಗ್ರೆಸ್​ ಟಿಕೆಟ್​ಗಾಗಿ ಅವರಿವರ ಕಾಲಿಗೆ ಬೀಳ್ತಿದ್ದಾನೆ. ಟಿಕೆಟ್​ಗಾಗಿ ಸುಧಾಕರ್​​​ ಅವರಿವರ ಕಾಲಿಗೆ ಬೀಳುತ್ತಿದ್ದಾನೆ. ತಾಜ್​ ವೆಸ್ಟೆಂಡ್​ ಹೋಟೆಲ್​ನಲ್ಲಿ ಕಾಂಗ್ರೆಸ್​​ ನಾಯಕರ ಕಾಲಿಗೆ ಬಿದ್ದಿದ್ದಾರೆ ಎಂದರು.

ಸುಧಾಕರ್ ಡಬಲ್ ಗೇಮ್ ರಾಜಕಾರಣಿ. ತಾಕತ್ತು ಇದ್ರೆ ದಮ್ಮು ಇದ್ರೆ ಚಿಕ್ಕಬಳ್ಳಾಪುರದಲ್ಲಿ ಇನ್ನೂ ಮುಂದೆ ಒಂದು ಓಟು ಹೆಚ್ಚಿಗೆ ತೆಗೆದುಕೊಳ್ಳಿ ನೋಡೋಣ. ದಲಿತರನ್ನು ಕಂಡ್ರೆ ದೂರ ಓಡುತ್ತಿದ್ರು, ಈಗ ದಲಿತರ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.ಇದೇ ವೇಳೆ ಒಂದು ಅನ್ನ, ದಾನ, ಧರ್ಮ ಮಾಡದೆ ಪ್ರದೀಪ್ ಈಶ್ವರ್ ಶಾಸಕರಾಗಿದ್ದಾರೆ ಅನ್ನೊ ಡಾ.ಕೆ.ಸುಧಾಕರ್ ಹೇಳಿಕೆಗೆ ತಿರುಗೇಟು ನೀಡಿದರು.

ಕಳೆದ ಹತ್ತು ವರ್ಷಗಳಿಂದ ಸಮಾಜ ಸೇವೆ ಶಿಕ್ಷಣ ಸೇವೆಯಲ್ಲಿ ತೊಡಗಿದ್ದು, ಶಾಸಕರಾದ ಮೇಲೆ ಶಾಲಾ ಕಾಲೇಜು ಅಂಗನವಾಡಿಗಳಿಗೆ ಬಟ್ಟೆ ಬರೆ ಅನ್ನ ದಾನ ಧರ್ಮ ಪ್ರೋತ್ಸಾಹ ಧನ ನೀಡುತ್ತಿದ್ದೇನೆ. ಶಾಸಕರಾದ ಮೇಲೆ ಆರೋಗ್ಯ ಸೇವೆ, ಶಿಕ್ಷಣ ಸೇವೆ, ದಲಿತರು ಬಡವರ ಸೇವೆಯಲ್ಲಿ ತೊಡಗಿದ್ದೇನೆ. ಅಯೋಗ್ಯ ಡಾ.ಕೆ.ಸುಧಾಕರ್​ಗೆ ದಲಿತರ ಸ್ಮಶಾನಕ್ಕೆ ಜಾಗ ಕೊಡೊ ಯೋಗ್ಯತೆ ಇಲ್ಲ. ನಾನು ಶಾಸಕನಾದ ಮೇಲೆ ಸ್ವಗ್ರಾಮದಲ್ಲಿ ದಲಿತರ ಸ್ಮಶಾನಕ್ಕೆ ಜಾಗ ಕೊಟ್ಟಿದ್ದೇನೆ ಎಂದು ತಿಳಿಸಿದರು.

Nimma Suddi
";