This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

State News

ಕೇಂದ್ರ ಕೊಟ್ಟ ಅನುದಾನವನ್ನು ಸರಿಯಾಗಿ ಬಳಸಿಲ್ಲ : ಪ್ರಲ್ಹಾದ್ ಜೋಶಿ

ಕೇಂದ್ರ ಕೊಟ್ಟ ಅನುದಾನವನ್ನು ಸರಿಯಾಗಿ ಬಳಸಿಲ್ಲ : ಪ್ರಲ್ಹಾದ್ ಜೋಶಿ

ಬೆಂಗಳೂರು: ರಾಜ್ಯದಲ್ಲಿ ಸ್ವತಃ ಉಪ ಮುಖ್ಯಮಂತ್ರಿ ಸೇರಿ ಹಲವಾರು ಶಾಸಕರು ಅಭಿವೃದ್ಧಿಗೆ ಅನುದಾನ ಇಲ್ಲ ಎಂದಿದ್ದು, ಕಾಂಗ್ರೆಸ್ಸಿನ ಘೋಷಣೆಗಳು ಅರ್ಧಂಬರ್ಧ ಆಶ್ವಾಸನೆಗಳು. ಈಡೇರಿಸಲಾಗದೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಕ್ಷೇಪಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಬಜೆಟ್ 2.98 ಲಕ್ಷ ಕೋಟಿ ಇದ್ದು, ಫೆಬ್ರವರಿ ಮಧ್ಯಭಾಗಕ್ಕೆ ಬಂದರೂ ಶೇ 38 ರಷ್ಟು ಹಣ ವ್ಯಯಿಸದೆ ಬಾಕಿ ಇದ್ದು, 1.13 ಲಕ್ಷ ಕೋಟಿ ಹಣ ಖರ್ಚಾಗಿಲ್ಲ. ನಮ್ಮ ಕಡೆ ಒಮ್ಮೆ ಬಂದು ಚೆಕ್ ಮಾಡಿ ಎಂದರಲ್ಲದೆ, ನಮ್ಮಲ್ಲಿ ಪ್ರತಿ ತಿಂಗಳೂ ಪ್ರಧಾನಿಯವರು ಹಣ ಖರ್ಚಾದುದರ ಕುರಿತು ಸಭೆ ನಡೆಸುತ್ತಿದ್ದು, ಮಾರ್ಚ್‍ನಲ್ಲಿ ಲೆಕ್ಕ ತೋರಿಸುತ್ತಾರಷ್ಟೇ ಎಂದು ಹೇಳಿದರು.

ಕೇಂದ್ರ ಪ್ರಾಯೋಜಿತ ವಿವಿಧ ಯೋಜನೆಗಳ ಶೇ 34 ರಷ್ಟು (5,727 ಕೋಟಿ ರೂ) ಹಣ ಖರ್ಚಾಗದೆ ಉಳಿದಿದೆ. ರಾಜ್ಯ ಸರ್ಕಾರದ ಡ್ಯಾಶ್ ಬೋರ್ಡಿನ ಮಾಹಿತಿ ತಿಳಿಸಿದ್ದು, ಕೇಂದ್ರ ಸರ್ಕಾರ ರಾಜ್ಯದ ಕೃಷಿ ಇಲಾಖೆಗೆ ಕೊಟ್ಟ ಹಣವೂ ಸರಿಯಾಗಿ ಖರ್ಚಾಗಿಲ್ಲ. ಪಶು ಚಿಕಿತ್ಸಾಲಯ, ಪಶುಗಳಿಗೆ ಬೇಕಾದ ಔಷಧಿಗೆ ಬೇಡಿಕೆ ಇದೆ. ಆದರೆ, ಆ ಸಂಬಂಧ ಕೇಂದ್ರ ಕೊಟ್ಟ ಅನುದಾನವನ್ನು ಸರಿಯಾಗಿ ಬಳಸಿಲ್ಲ ಎಂದರು.