This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

State News

ಗಲಾಟೆ ಮಾಡಿದವರನ್ನ ಒದ್ದು ಒಳಗಡೆ ಹಾಕಬೇಕು : ಪ್ರಲ್ಹಾದ್ ಜೋಶಿ

ಗಲಾಟೆ ಮಾಡಿದವರನ್ನ ಒದ್ದು ಒಳಗಡೆ ಹಾಕಬೇಕು : ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ, ಬೆಂಗಳೂರು: ಅಯೋಧ್ಯೆಯ ರಾಮ ಮಂದಿರಕ್ಕೆ ತೆರಳುತ್ತಿದ್ದ ರೈಲಿಗೆ ಹೊಸಪೇಟೆಯಲ್ಲಿ ಬೆಂಕಿ ಹಚ್ಚಿ ಸುಡುತ್ತೇವೆ ಎಂದು ಬೆದರಿಕೆ ಹಾಕಿದವರನ್ನು ಒದ್ದು ಒಳಗೆ ಹಾಕಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಇದು ಕಾಂಗ್ರೆಸ್ ತುಷ್ಟೀಕರಣ ರಾಜಕಾರಣದ ಫಲ. ಗಲಾಟೆ ಮಾಡಿದವರನ್ನ ಒದ್ದು ಒಳಗಡೆ ಹಾಕಬೇಕು ಎಂದರು.

ಕಾಂಗ್ರೆಸ್ ನಾಯಕ ಹರಿಪ್ರಸಾದ್‌ ಮಂತ್ರಿ ಆಗುವ ಕನಸು ಕಂಡಿದ್ದರು. ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೂ ಮನ್ನವೇ ಗೋಧ್ರಾ ಹತ್ಯೆ ಬಗ್ಗೆ ಉಲ್ಲೇಖ ಮಾಡಿದ್ದರು. ಅಯೋಧ್ಯೆಗೆ ಹೋಗುವವರು ಹಿಂದೂಗಳು. ಅವರಿಗೆ ಮುಸ್ಲಿಂ ವ್ಯಕ್ತಿಗಳು ಬೆದರಿಕೆ ಹಾಕಿದ್ದಾರೆ. ಪಿಎಫ್‌ಐ ನವರು ಬೆದರಿಕೆ‌ ಹಾಕಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆರೋಪಿಸಿದ್ದಾರೆ.

ಮತ ಬ್ಯಾಂಕ್​​​ಗೋಸ್ಕರ ಇಂತಹ ಘಟನೆಗಳಿಗೆ ಕಾಂಗ್ರೆಸ್ ಉತ್ತೇಜನ ನೀಡುತ್ತಿದೆ. ಅಯೋಧ್ಯಗೆ ಹೋಗಿ ಬಂದರೆ ತಪ್ಪೇನು? ಬೆದರಿಕೆ ಹಾಕಿದವರ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿ ಎಂದು ಜೋಶಿ ಆಗ್ರಹಿಸಿದ್ದಾರೆ.