This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

Education NewsLocal NewsState News

ಬಾಗಲಕೋಟೆಯಲ್ಲಿ ಸೆ.10ರಂದು ಪೂರ್ವಭಾವಿ ಸಭೆ

ಬಾಗಲಕೋಟೆಯಲ್ಲಿ ಸೆ.10ರಂದು ಪೂರ್ವಭಾವಿ ಸಭೆ

ಬಾಗಲಕೋಟೆ

ಶಫರ್ಡ್ ಇಂಡಿಯಾ ಇಂಟರ್‌ನ್ಯಾಶನಲ್ ಸಂಘಟನೆಯ ರಾಷ್ಟ್ರಮಟ್ಟದ ಬೃಹತ್ ಸಮಾವೇಶದ ಆಯೋಜನೆಯ ಪೂರ್ವಭಾವಿ ಸಭೆ – ಸೆ.10 ರಂದು ಬಾಗಲಕೋಟೆಯಲ್ಲಿ ಆಯೋಜಿಸಲಾಗಿದೆ’ ಎಂದು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಡಿ.ಬಿ.ಸಿದ್ದಾಪೂರ ತಿಳಿಸಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಾಗಲಕೋಟೆಯ ಬಾಬು ಜಗಜೀವನ್‌ ರಾಂ ಭವನದಲ್ಲಿ ಅಂದು ಬೆಳಗ್ಗೆ 10.30ಕ್ಕೆ ಸಭೆ ನಡೆಯಲಿದೆ. ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ, ಮಾಜಿ ಸಚಿವ ಎಚ್.ವಿಶ್ವನಾಥ, ರಾಷ್ಟ್ರೀಯ ಸಂಚಾಲಕ, ಮಾಜಿ ಸಚಿವ ಎಚ್.ಎಂ.ರೇವಣ್ಣ ಹಾಗೂ ಪದಾಧಿ ಕಾರಿಗಳು ಭಾಗವಹಿಸಲಿದ್ದಾರೆ.

ಸಭೆಯಲ್ಲಿ ಜಿಲ್ಲೆಯ ಶಾಸಕರು, ರಾಜಕೀಯ ಮುಖಂಡರು ಉಪಸ್ಥಿತರಿರಲಿದ್ದಾರೆ. ಕುರುಬ ಸಮಾಜದ ಪ್ರಮುಖರು, ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಬೇಕು’ ಎಂದು ಕೋರಿದರು.

‘ಬೆಳಗಾವಿಯಲ್ಲಿ ಅ.3ರಂದು ರಾಷ್ಟ್ರಮಟ್ಟದ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ದೇಶದ ನಾನಾ ಭಾಗಗಳ ಕುರುಬ ಸಮಾಜದ ಮುಖಂಡರು, ಸಚಿವರು, ಶಾಸಕರು ಭಾಗವಹಿಸಲಿದ್ದಾರೆ. ದೇಶದಲ್ಲಿ 12 ಕೋಟಿಗೂ ಅಧಿಕ ಜನಸಂಖ್ಯೆ ಹೊಂದಿರುವ ಸಮಾಜವನ್ನು ಒಂದೇ ವೇದಿಕೆಯಡಿ ಸಂಘಟಿಸುವ ಉದ್ದೇಶದಿಂದ ಸಂಘಟನೆಯಿಂದ ಸಮಾವೇಶ ನಡೆಸಲಾಗುತ್ತಿದೆ. ಸಮಾವೇಶದಲ್ಲಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಗುತ್ತದೆ’ ಎಂದರು.

ಮುಖಂಡರಾದ ಕಾಶೀನಾಥ ಹುಡೇದ, ಎಸ್.ಡಿ.ಜೋಗಿನ, ಎಚ್.ಬಿ.ಗೊರವರ, ವೀರಣ್ಣ ಹಳೇಗೌಡರ, ಎಸ್.ಎಚ್‌.ತೆಕ್ಕೆನ್ನವರ ಇದ್ದರು.