This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

State News

ಕಾನಿಪದಿಂದ ಪತ್ರಿಕಾ ದಿನಾಚರಣೆ

ಕಾನಿಪದಿಂದ ಪತ್ರಿಕಾ ದಿನಾಚರಣೆ

ಜು.೧೭ರಂದು ಪತ್ರಿಭಾ ಪುರಸ್ಕಾರ, ಉಪನ್ಯಾಸ ಕಾರ್ಯಕ್ರಮ

ನಿಮ್ಮ ಸುದ್ದಿ ಬಾಗಲಕೋಟೆ

ಬಾಗಲಕೋಟೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕಲಾದಗಿ ಹಣ್ಣು ಬೆಳೆಗಾರರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ ಅಂಗವಾಗಿ, ಪ್ರತಿಭಾ ಪುರಸ್ಕಾರ, ಪ್ರಶಸ್ತಿ ಪ್ರಧಾನ ಹಾಗೂ ಉಪನ್ಯಾಸ ಕಾರ್ಯಕ್ರಮ ಜು.೧೭ರಂದು ಬೆಳಗ್ಗೆ ೧೦.೩೦ ಗಂಟೆಗೆ ಕಲಾದಗಿಯ ಹಣ್ಣು ಬೆಳೆಗಾರರ ವಿದ್ಯಾ ಸಂಸ್ಥೆಯ ಆವರಣ ಚಿಕ್ಕು ಉದ್ಯಾನವನದಲ್ಲಿ ಜರುಗಲಿದೆ.

ಬಾಗಲಕೋಟೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿAದ ಕೊಡ ಮಾಡುವ ದಿ.ಶರಣಬಸವರಾಜ ಜಿಗಜಿನ್ನಿ ಅವರ ಸ್ಮರಣಾರ್ಥವಾಗಿ ಹಿರಿಯ ಪತ್ರಕರ್ತರಿಗೆ ಕೊಡಮಾಡುವ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಬಾಗಲಕೋಟೆಯ ಈಶ್ವರ ಶೆಟ್ಟರ ಹಾಗೂ ದಿ.ಶ್ರೀಶೈಲ ಅಂಗಡಿ ಅವರ ಸ್ಮರಣಾರ್ಥ ಅತ್ಯುತ್ತಮ ಗ್ರಾಮೀಣ ಪತ್ರಕರ್ತರ ಪ್ರಶಸ್ತಿಗೆ ಮಹಾಲಿಂಗಪೂರ ಮಹೇಶ ಮನ್ನಯ್ಯನವರಮಠ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಜಮಖಂಡಿಯ ಓಲೇಮಠದ ಡಾ.ಅಭಿನವಕುಮಾರ ಚನ್ನಬಸವ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಉದ್ಘಾಟಿಸಲಿದ್ದಾರೆ. ಕಾನಿಪ ಜಿಲ್ಲಾಧ್ಯಕ್ಷ ಆನಂದ ಧಲಬಂಜನ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಎಂಎಲ್‌ಸಿ ಪಿ.ಎಚ್.ಪೂಜಾರ, ಹಣಮಂತ ನಿರಾಣಿ, ಬಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಅಜಯಕುಮಾರ ಸರನಾಯಕ, ಕಾನಿಪ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಿ.ಲೋಕೇಶ ಆಗಮಿಸಲಿದ್ದು ಹಿರಿಯ ಪತ್ರಕರ್ತ ಹುಬ್ಬಳ್ಳಿಯ ಡಾ.ಬಂಡು ಕುಲಕರ್ಣಿ, ಬೆಂಗಳೂರಿನ ಸಿದ್ದು ಕಾಳೋಜಿ ಅವರು ಉಪನ್ಯಾಸ ನೀಡಲಿದ್ದಾರೆ ಎಂದು ಜಿಲ್ಲಾ ಕಾನಿಪ ಸಂಘ ಹಾಗೂ ಕಲಾದಗಿ ಹಣ್ಣು ಬೆಳೆಗಾರರ ಸಂಘ ತಿಳಿಸಿದೆ.