This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Crime NewsLocal NewsPolitics News

4ರಂದು ಬೀಳಗಿಯಲ್ಲಿ ಪ್ರತಿಭಟನೆ

4ರಂದು ಬೀಳಗಿಯಲ್ಲಿ ಪ್ರತಿಭಟನೆ

ಹುಬ್ಬಳ್ಳಿ

ರೈತ ಹೋರಾಟಗಾರರ ಮೇಲೆ ಮಾಜಿ ಸಚಿವ ಮುರಗೇಶ ನಿರಾಣಿ ಕಡೆಯವರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಬಾಗಲಕೋಟೆ ಜಿಲ್ಲೆಯ ಬೀಳಗಿ ಅಂಬೇಡ್ಕರ್ ವೃತ್ತದಲ್ಲಿ ಸಿ. 4ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಸಂಚಾಲಕ ಸಿದ್ದು ತೇಜಿ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,”ಕಬ್ಬು ಬೆಳೆ ಬಿಲ್ ಬಾಕಿ ಬಿಡುಗಡೆ ಮತ್ತು ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹೋರಾಟಕ್ಕೆ ಮುಂದಾಗಿದ್ದ ರೈತ ಹೋರಾಟಗಾರರ ಮೇಲೆ ಕೆಲ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಇದರಲ್ಲಿ ರೈತ ಮುಖಂಡರಾದ ಯಲ್ಲಪ್ಪ ಹೆಗಡೆ, ಹನುಮಂತ ಶಿಂಧೆ ಸೇರಿದಂತೆ ಹಲವರ ಮೇಲೆ ಹಲ್ಲೆ ನಡೆದಿದೆ. ಈ ಕುರಿತು ಆರೋಪಿಗಳ ಬಂಧನಕ್ಕೆ ದೂರು ನೀಡಿದ್ದರೂ ಪೊಲೀಸರು ಯಾವುದೇ ಕ್ರಮಕೈಗೊಂಡಿಲ್ಲ” ಎಂದು ದೂರಿದರು.

”ಪೊಲೀಸ್ ಇಲಾಖೆ ರೈತ ಹೋರಾಟಗಾರಿಗೆ ರಕ್ಷಣೆ ನೀಡುವ ಕೆಲಸ ಮಾಡಬೇಕು. ಘಟನೆ ನಡೆದು 4 ದಿನ ಕಳೆದರೂ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ.”ಎಂದು ಕಿಡಿಕಾರಿದರು. ರವಿರಾಜ ಕಂಬಳಿ, ಮಹೇಶ ಹೋಳಿ, ಬಾಬಾಜಾನ ಮುಧೋಳ, ಪ್ರಕಾಶ ಕಿತ್ತೂರ, ಸಂಜು ಧುಮಕನಾಳ ಇತರರು ಇದ್ದರು.

";