This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ವಿಧಾನಸಭೆ ಪ್ರತಿಪಕ್ಷ ನಾಯಕನಾಗಲು ಆರ್ ಅಶೋಕ್ ನಾಲಾಯಕ್ : ಪ್ರಮೋದ್ ಮುತಾಲಿಕ್

ವಿಧಾನಸಭೆ ಪ್ರತಿಪಕ್ಷ ನಾಯಕನಾಗಲು ಆರ್ ಅಶೋಕ್ ನಾಲಾಯಕ್ : ಪ್ರಮೋದ್ ಮುತಾಲಿಕ್

ಉಡುಪಿ: ವಿಧಾನಸಭೆ ಪ್ರತಿಪಕ್ಷ ನಾಯಕನಾಗಲು ಆರ್ ಅಶೋಕ್ ನಾಲಾಯಕ್ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಶುಕ್ರವಾರ ವಾಗ್ದಾಳಿ ನಡೆಸಿದರು.

ಮಂಗಳೂರು ಪಬ್ ದಾಳಿಕೊರರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದ ಬಗ್ಗೆ ಅಶೋಕ್ ಹೇಳಿಕೆ ಕುರಿತ ಹಿಂದೂ ಸಂಘಟನೆಗಳ ಮುನಿಸು ಇನ್ನೂ ತಣಿದಿಲ್ಲ ಎಂಬುದು ಸ್ಪಷ್ಟವಾಗಿದ್ದು, ಪಬ್ ದಾಳಿ ಮಾಡಿದ್ದ ಬಜರಂಗದಳ ಕಾರ್ಯಕರ್ತರ ಮೇಲೆ ಗುಂಡಾ ಕಾಯ್ದೆ ಹಾಕಿದ್ದೆ ಎಂದು ಅಧಿವೇಶನದಲ್ಲಿ ಅಶೋಕ್ ಹೇಳಿದ್ದರು. ಆದರೆ, ಮಂಗಳೂರು ಪಬ್ ದಾಳಿ ಮಾಡಿದ್ದು ಬಜರಂಗದಳ ಅಲ್ಲ, ಶ್ರೀರಾಮ ಸೇನೆ ಎಂದು ಸಾಮಾಜಿ ಜಾಲತಾಣಗಳಲ್ಲಿ ಶ್ರೀರಾಮ ಸೇನೆ ಸಂದೇಶ ಪ್ರಕಟಿಸಿದೆ ಎಂದರು.

ಮಂಗಳೂರು ಪಬ್ ದಾಳಿ ನಡೆಸಿದ್ದು ಶ್ರೀರಾಮ ಸೇನೆ ಕಾರ್ಯಕರ್ತರು. ಆ ಸಂದರ್ಭದಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಯಾವುದೇ ಗುಂಡಾ ಕಾಯ್ದೆ ಹಾಕಿರಲಿಲ್ಲ. ಆದರೆ, ಹಿಂದೂ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆಯಡಿ ಪ್ರಥಮ ಬಾರಿ ಪ್ರಕರಣ ದಾಖಲಿಸಿದವರೇ ಆರ್. ಅಶೋಕ್. ಕಾಂಗ್ರೆಸ್​ನವರು ಯಾವತ್ತೂ ಹಿಂದೂ ಕಾರ್ಯಕರ್ತರ ಮೇಲೆ ಗುಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಲ್ಲ.ಹೇಳಿದರು.

ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು ಹಿಂದೂ ಕಾರ್ಯಕರ್ತರಿಗೆ ಆರ್ ಅಶೋಕ್ ಕೊಟ್ಟ ಕೊಡುಗೆ. ಅವರು ಗೃಹ ಸಚಿವರಾಗಿದ್ದಾಗ ಪಿಎಫ್​ಐ ಗಲಾಟೆ ಮಾಡಿತ್ತು. ಆದರೆ ಆ ಬಗ್ಗೆ ಗೃಹ ಸಚಿವರಾಗಿ ಅಶೋಕ್ ಒಂದೇ ಒಂದು ಪತ್ರ ಕೇಂದ್ರಕ್ಕೆ ಬರೆದಿರಲಿಲ್ಲ ಎಂದು ಕಿಡಿ ಕಾರಿದರು.

Nimma Suddi
";