This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

State News

ಪಕ್ಷದ ಸಮಸ್ಯೆಯೇ ನಿಮಗೆ ಮುಖ್ಯವಾದರೆ ಡಿಸಿಎಂ ಹುದ್ದೆಗೆ ರಾಜೀನಾಮೆ ನೀಡಿ: ಆರ‍್ ಅಶೋಕ್

ಪಕ್ಷದ ಸಮಸ್ಯೆಯೇ ನಿಮಗೆ ಮುಖ್ಯವಾದರೆ ಡಿಸಿಎಂ ಹುದ್ದೆಗೆ ರಾಜೀನಾಮೆ ನೀಡಿ: ಆರ‍್ ಅಶೋಕ್

ಬೆಂಗಳೂರು: ಹಿಮಾಚಲ ಪ್ರದೇಶ ಕಾಂಗ್ರೆಸ್​​ನಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನಗೊಳಿಸಲು ಡಿಸಿಎಂ ಡಿಕೆ ಶಿವಕುಮಾರ್ ಅಲ್ಲಿಗೆ ತೆರಳುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ಪ್ರತಿಪಕ್ಷ ನಾಯಕ ಆರ್ ಅಶೋಕ ಕಿಡಿಕಾರಿದರು.

ನೀರಿನ ಬಿಕ್ಕಟ್ಟು ಸೇರಿದಂತೆ ಹಲವು ಸಮಸ್ಯೆಗಳನ್ನು ರಾಜ್ಯದ ಜನತೆ ಎದುರಿಸುತ್ತಿರುವಾಗ, ಅವುಗಳಿಗಿಂತಲೂ ಪಕ್ಷದ ಸಮಸ್ಯೆಯೇ ನಿಮಗೆ ಮುಖ್ಯವಾದರೆ ಡಿಸಿಎಂ ಹುದ್ದೆಗೆ ರಾಜೀನಾಮೆ ನೀಡಿ. ಪೂರ್ಣಾವಧಿಗೆ ಪಕ್ಷದ ಅಧ್ಯಕ್ಷರಾಗಿಯೇ ಮುಂದುವರಿಯಿರಿ ಎಂದು ಅಶೋಕ್ ಆಗ್ರಹಿಸಿದ್ದಾರೆ.ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ತೆಲಂಗಾಣ ಚುನಾವಣೆಗಾಗಿ ರಾಜ್ಯವನ್ನು ಮೈಮರೆತು ಕಾವೇರಿ ನೀರನ್ನ ಬೇಕಾಬಿಟ್ಟಿ ತಮಿಳುನಾಡಿಗೆ ಹರಿಸಿ ರಾಜ್ಯದ ಜಲಾಶಯಗಳನ್ನ ಬರಿದು ಮಾಡಿದ್ದಾಯ್ತು ಎಂದರು.

ಈಗ ಹಿಮಾಚಲ ಪ್ರದೇಶದ ರಾಜಕೀಯ ಉಸಾಬರಿಗಾಗಿ ರಾಜ್ಯ ಬಿಟ್ಟು ಹೋದರೆ ನೀರಿಲ್ಲದೆ ಪರದಾಡುತ್ತಿರುವ ಬೆಂಗಳೂರಿನ ಜನರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಯಾರು ಡಿಸಿಎಂ ಡಿಕೆ ಶಿವಕುಮಾರ್ ಅವರೇ ಎಂದು ಪ್ರಶ್ನಿಸಿದ್ದಾರೆ.ತಮ್ಮ ‘ಆತ್ಮಸಾಕ್ಷಿ’ಗೆ ಕನ್ನಡಿಗರ ಹಿತಕ್ಕಿಂತ ಪಕ್ಷದ ಹಿತವೇ ಮುಖ್ಯವಾದರೆ ರಾಜೀನಾಮೆ ಕೊಟ್ಟು ಪೂರ್ಣಾವಧಿ ಅಧ್ಯಕ್ಷರಾಗಿ ಪಕ್ಷದ ಕೆಲಸ ಮಾಡಿ ಎಂದು ಹೇಳಿದರು.

ಅದು ಬಿಟ್ಟು ಕೇವಲ ಅಧಿಕಾರಕ್ಕಾಗಿ ಬೆಂಗಳೂರು ಅಭಿವೃದ್ಧಿ, ನೀರಾವರಿ ಅಂತಹ ಪ್ರಮುಖ ಖಾತೆಗಳ ಜವಾಬ್ದಾರಿ ಹೊತ್ತುಕೊಂಡು ಕರ್ತವ್ಯ ವಂಚನೆ ಮಾಡಿ ಪದೇ ಪದೇ ಕನ್ನಡಿಗರಿಗೆ ದ್ರೋಹ ಮಾಡಬೇಡಿ ಎಂದು ಸೂಚಿಸಿದರು.

Nimma Suddi
";