This is the title of the web page
This is the title of the web page

Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Politics News

ರೈಲ್ವೆ ಅಧಿಕಾರಿಗಳ ಭೇಟಿ, ಪರಿಶೀಲನೆ

ನಿಮ್ಮ ಸುದ್ದಿ ಬಾಗಲಕೋಟೆ
ಬಾಗಲಕೋಟೆ ರೈಲ್ವೆ ನಿಲ್ದಾಣಕ್ಕೆ ದಕ್ಷಿಣ ಪಶ್ಚಿಮ ರೈಲ್ವೆ ವಿಭಾಗದ ಜನರಲ್ ಮ್ಯಾನೇಜರ್ ಎ.ಕೆ.ಸಿಂಗ್ ಭೇಟಿ ನೀಡಿ ನಿಲ್ದಾಣದ ಆವರಣದಲ್ಲಿ ಕೈಗೊಂಡ ಕಾಮಗಾರಿಗಳನ್ನು ವೀಕ್ಷಿಸಿದರು.
ಶುಕ್ರವಾರ ರೈಲ್ವೆ ಅಧಿಕಾರಿಗಳು ಭೇಟಿ ನೀಡಿದ ಸಂದರ್ಭದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ವೀರಣ್ಣ ಚರಂತಿಮಠ ಅವರು ಎ.ಕೆ.ಸಿಂಗ್ ಅವರ ಜೊತೆ ರೈಲು ನಿಲ್ದಾಣ ಅಭಿವೃದ್ದಿ ಕುರಿತು ಚರ್ಚಿಸಿದರು. ರೈಲು ನಿಲ್ದಾಣದಲ್ಲಿ ಪ್ರತಿಯೊಂದು ಪ್ಲಾಟಫರ‍್ಮಗಳಲ್ಲಿ ಪ್ರಯಾಣಿಕರಿಗೆ ಕೂಡಲು ಆಸನಗಳ ವ್ಯವಸ್ಥೆ ಹಾಗೂ ಮೇಲ್ಚಾವಣಿ ವ್ಯವಸ್ಥೆ ಮಾಡಲು ತಿಳಿಸಿದರು. ಅಲ್ಲದೇ ರೈಲು ನಿಲ್ದಾಣದ ಆವರಣದಲ್ಲಿ ನಿರ್ಮಿಸುತ್ತಿರುವ ನೌಕರರ ವಸತಿ ಗೃಹಗಳ ಸುತ್ತಮುತ್ತಲೂ ಕಂಪೌAಡ್ ನಿರ್ಮಾಣ ಹಾಗೂ ಸ್ವಚ್ಛತೆ ಆದ್ಯತೆ ನೀಡಲು ಶಾಸಕ ವೀರಣ್ಣ ಚರಂತಿಮಠ ತಿಳಿಸಿದರು.
ರೈಲು ನಿಲ್ದಾಣದ ಆವರಣದಲ್ಲಿ ಸುತ್ತಮುತ್ತಲೂ ಕಂಪೌAಡ್ ನಿರ್ಮಾಣವಾಗಬೇಕು. ಸ್ವಚ್ಚತೆಗೆ ಹೆಚ್ಚು ಗಮನಹರಿಸುವಂತೆ ಅಧಿಕಾರಿಗಳು ಸೂಚಿಸಿಲು ತಿಳಿಸಿದರು. ಗದಗ, ಇಲಕಲ್ಲ ಹಾಗೂ ಗಜೇಂದ್ರಗಡ ಮಾರ್ಗದ ಸರ್ವೇ ಕಾರ್ಯ ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದರು. ಭೇಟಿ ಸಂದರ್ಭದಲ್ಲಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅರವಿಂದ, ಬಾಗಲಕೋಟೆ ರೈಲ್ವೆ ನಿಲ್ದಾಣದ ವ್ಯವಸ್ಥಾಪಕ ಕಮಲ ಕಿಶೋರ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Nimma Suddi
";