This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics News

ರಾಮ ನಮ್ಮ ದಮನಿ ದಮನಿಯಲ್ಲಿ ಇರುವವನು -ಹೆಚ್ ವಿಶ್ವನಾಥ್

ರಾಮ ನಮ್ಮ ದಮನಿ ದಮನಿಯಲ್ಲಿ ಇರುವವನು -ಹೆಚ್ ವಿಶ್ವನಾಥ್

ಮೈಸೂರು: ರಾಮ ದೇಶದ ಅಸ್ಮಿತೆ ಆತ ರಾಜಕೀಯ ವಿಚಾರ ಅಲ್ಲ. ರಾಮ ನಮ್ಮ ದಮನಿ ದಮನಿಯಲ್ಲಿ ಇರುವವನಿದ್ದು, ಲೋಕಸಭೆಗೆ ಅನುಕೂಲವಾಗುತ್ತದೆ ಅನ್ನೊ ಹೆಳಿಕೆ ಸರಿಯಲ್ಲ. ಹೆಂಡತಿಯನ್ನು ಬಿಡದ ರಾಮನಿಗೆ ಹೆಂಡತಿ ತೊರೆದ ಪ್ರಧಾನಿ ಹೇಗೆ? ಎಂದು ಮೈಸೂರಿನಲ್ಲಿ ಹೆಚ್ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.

ಈ ವೇಳೆ ಕೃತಜ್ಞತೆಯೇ ಇಲ್ಲದ ನಾಯಕ ಶಾಮನೂರು ಶಿವಶಂಕರಪ್ಪ. ಹಣವಿದೆ ಎಲ್ಲರನ್ನೂ ಕೊಂಡುಕೊಳ್ಳಬಹುದು ಅಂದುಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.ರಾಮ ದೇಶದ ಅಸ್ಮಿತೆ ಆತ ರಾಜಕೀಯ ವಿಚಾರ ಅಲ್ಲ. ರಾಮ ನಮ್ಮ ದಮನಿ ದಮನಿಯಲ್ಲಿ ಇರುವವನು. ಅದರಿಂದ ಲೋಕಸಭೆಗೆ ಅನುಕೂಲವಾಗುತ್ತದೆ ಅನ್ನೋದು ಸರಿಯಲ್ಲ. ನಮ್ಮ ಪ್ರತಿ ಊರಿನಲ್ಲೂ ರಾಮಮಂದಿರ ಕಟ್ಟಿದ್ದಾರೆ ಎಂದರು.

ಬಡವರ ಹಸಿವಿನ ಬಗ್ಗೆ ದೇಶದ ಅಭಿವೃದ್ಧಿ ಬಗ್ಗೆ ಮಾತಾನಾಡಿದ ಅವರು,ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಗೆಲ್ಲಿಸಿ ಶ್ಯಾಮನೂರು ಶಿವಶಂಕರಪ್ಪ ಹೇಳಿಕೆ ವಿಚಾರ ಸಂಬಂಧ ಕೃತಜ್ಞತೆಯೇ ಇಲ್ಲದ ನಾಯಕ ಶ್ಯಾಮನೂರು ಶಿವಶಂಕರಪ್ಪ ಎಂದು​ ಸಿಡಿಮಿಡಿಗೊಂಡರು.

ದುಡ್ಡು ಇದೆ ಎಂದು ಎಲ್ಲರನ್ನೂ ಕೊಂಡುಕೊಳ್ಳಬಹುದು ಅಂದುಕೊಂಡಿದ್ದಾರೆ. ನಮ್ಮವರೇ ಸರಿ ಇಲ್ಲ ನಮ್ಮ ಮಂತ್ರಿಗಳು, ಮುಖ್ಯಮಂತ್ರಿಗಳು ಅವರ ಮೇಲೆ ಡಿಪೆಂಡ್ ಆಗಿದ್ದಾರೆ. ಅಲ್ಲಿಗೆ ಹೋದಾಗ ಅವರ ಗೆಸ್ಟ್ ಹೌಸ್‌ನಲ್ಲೇ ಮಲಗುತ್ತಾರೆ. ಕಾಂಗ್ರೆಸ್ ಪಕ್ಷ ಜೀವಂತವಾಗಿದ್ದರೆ ಶಿವಕುಮಾರ್ ಅವರನ್ನು ಅಮಾನತು ಮಾಡಿ. ಅವನು ಇಲ್ಲದಿದ್ದರೆ ಕಾಂಗ್ರೆಸ್ ನಡೆಯಲ್ವಾ? ಎಂದು ಏಕವಚನದಲ್ಲೇ ಹೆಚ್​ ವಿಶ್ವನಾಥ್ ಅವರು ಶ್ಯಾಮನೂರು ಶಿವಶಂಕರಪ್ಪ ವಿರುದ್ದ ಗುಡುಗಿದರು.

";