This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Feature ArticleLocal NewsSports NewsState News

ಆರ್ ಸಿಬಿ ಕಪ್ ಗೆಲ್ಲಲು ಕಾರಣವಾದ ಶ್ರೇಯಾ ಪಾಟೀಲಗೂ ಬಾಗಲಕೋಟೆಗೂ ಲಿಂಕ್ ಹೇಗೆ? ವರದಿ ಓದಿ

ಆರ್ ಸಿಬಿ ಕಪ್ ಗೆಲ್ಲಲು ಕಾರಣವಾದ ಶ್ರೇಯಾ ಪಾಟೀಲಗೂ ಬಾಗಲಕೋಟೆಗೂ ಲಿಂಕ್ ಹೇಗೆ? ವರದಿ ಓದಿ

ಬಾಗಲಕೋಟೆ: ಶ್ರೇಯಾಂಕಾ ಪಾಟೀಲ. ಇದು ಈಗ ಎಲ್ಲರಿಗೂ ಚಿರಪರಿಚಿತ ಹೆಸರು. ಯಾಕಂದರೆ, ಕಳೆದ 18 ವರ್ಷಗಳಿಂದ ಗೆಲ್ಲಲಾಗದ ಕಪ್ ಗೆದ್ದ ಆರ್ ಸಿಬಿ ಟೀಂನ ಪ್ರಮುಖ ಆಟಗಾರ್ತಿ. ತಮ್ಮ ಸ್ಪಿನ್ ಮೂಲಕವೇ ನಾಲ್ಕು ವಿಕೆಟ್ ಕಿತ್ತು ತಂಡದ ಗೆಲುವಿಗೆ ಕಾರಣವಾದವರು. ಅವರಿಗೂ ಬಾಗಲಕೋಟೆಗೂ ಸಂಬಂಧ ಇದೆ. ಅದು  ಹೇಗಂತ ತಿಳಿಯಲು ಈ ಸ್ಟೋರಿ ಓದಿ

Shreyanka Patil: ವುಮೆನ್ಸ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ಸ್ಪಿನ್ ಮೋಡಿ ಮಾಡುವ ಮೂಲಕ ಆರ್​ಸಿಬಿ ತಂಡದ ಯುವ ಆಲ್​ರೌಂಡರ್ ಶ್ರೇಯಾಂಕಾ ಪಾಟೀಲ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಇದುವರೆಗೆ ಯಾರೂ ಮಾಡದ ದಾಖಲೆ ಬರೆಯುವ ಮೂಲಕ ಎಂಬುದು ವಿಶೇಷ.

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಗೆಲುವಿನ ರೂವಾರಿಗಳಲ್ಲಿ ಕನ್ನಡತಿ ಶ್ರೇಯಾಂಕಾ ಪಾಟೀಲ್ ಕೂಡ ಒಬ್ಬರು.

ಏಕೆಂದರೆ ಈ ಪಂದ್ಯದಲ್ಲಿ 3.3 ಓವರ್​ಗಳನ್ನು ಎಸೆದ ಶ್ರೇಯಾಂಕಾ ಪಾಟೀಲ್ ಕೇವಲ 12 ರನ್​ಗಳನ್ನು ಮಾತ್ರ ನೀಡಿದ್ದರು. ಇದೇ ವೇಳೆ 4 ವಿಕೆಟ್​ಗಳನ್ನು ಕಬಳಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 113 ರನ್​ಗಳಿಗೆ ಆಲೌಟ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ವಿಶೇಷ ಎಂದರೆ ಈ 4 ವಿಕೆಟ್​ಗಳೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಎರಡು ಬಾರಿ ನಾಲ್ಕು ವಿಕೆಟ್ ಪಡೆದ ದಾಖಲೆಯೊಂದು ಶ್ರೇಯಾಂಕಾ ಹೆಸರಿಗೆ ಸೇರ್ಪಡೆಯಾಯಿತು. ಅಂದರೆ ಶ್ರೇಯಾಂಕಾ ಅವರನ್ನು ಹೊರತುಪಡಿಸಿ ಬೇರೆ ಯಾವುದೇ ಆಟಗಾರ್ತಿ WPL ನಲ್ಲಿ 2 ಬಾರಿ 4 ವಿಕೆಟ್ ಕಬಳಿಸಿಲ್ಲ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಲೀಗ್ ಹಂತದ ಪಂದ್ಯದಲ್ಲಿ 4 ವಿಕೆಟ್ ಕಬಳಿಸಿ ಮಿಂಚಿದ್ದ ಶ್ರೇಯಾಂಕ ಪಾಟೀಲ್ ಇದೀಗ ಫೈನಲ್ ಪಂದ್ಯದಲ್ಲೂ 4 ವಿಕೆಟ್​ಗಳನ್ನು ಉರುಳಿಸಿದ್ದಾರೆ. ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಯಾರೂ ಮಾಡದ ಸಾಧನೆ ಮಾಡಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಇನ್ನು ಈ ಬಾರಿಯ ಟೂರ್ನಿಯಲ್ಲಿ ಒಟ್ಟು 12 ವಿಕೆಟ್ ಕಬಳಿಸುವ ಮೂಲಕ ಪರ್ಪಲ್ ಕ್ಯಾಪ್ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಆರ್​ಸಿಬಿ ಮಹಿಳಾ ತಂಡದ ಪರ ಪರ್ಪಲ್ ಕ್ಯಾಪ್ ಗೆದ್ದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೂ ಶ್ರೇಯಾಂಕಾ ಪಾಟೀಲ್ ಪಾತ್ರರಾಗಿದ್ದಾರೆ.

ಶ್ರೇಯಾಂಕಾ ಪಾಟೀಲ್ ಬಾಗಲಕೋಟೆ ಯ ಶ್ರೀ ಮತಿ ಭಾರತಿ ಮೆಳ್ಳಿಗೇರಿ ಅವರ ಸಹೋದರಿ ಪುತ್ರಿ.

ಅವರ ಸಾಧನೆ ಗೆ ಶ್ರೀ ಹೇಮರೆಡ್ಡಿ ಮಲ್ಲಮ್ಮ ಸೇವಾ ಸಂಸ್ಥೆ ಅದ್ಯಕ್ಷರು ಶ್ರೀ ಮಹೇಶ್ ಕಕರಡ್ಡಿ ಅವರು ಅಭಿನಂದಿಸಿದ್ದಾರೆ.

Nimma Suddi
";