This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Agriculture NewsEducation NewsLocal NewsState News

ಸಂತ್ರಸ್ತರ ಭೂಸ್ವಾಧೀನ ಪರಿಹಾರ ಧನ ಬಿಡುಗಡೆ

*ಸಂತ್ರಸ್ತರ ಭೂಸ್ವಾಧೀನ ಪರಿಹಾರ ಧನ ಬಿಡುಗಡೆ*
———————————
ಬಾಗಲಕೋಟೆ : ಮಾರ್ಚ 11 (ಕರ್ನಾಟಕ ವಾರ್ತೆ) : ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಪರಿಹಾರದ ಬಿಲ್ಲನ್ನು ಪಾವತಿಸಲು ಕೃಷ್ಣಾ ಭಾಗ್ಯ ಜಲನಿಗಮದ ಮೂಲಕ ಒಟ್ಟು ರೂ.250 ಕೋಟಿ ಅನುದಾನ ಬಿಡುಗಡೆ ಮಾಡಲು ಸರ್ಕಾರ ಅನುಮೋದನೆ ನೀಡಿದೆ.
ಭೂಸ್ವಾಧೀನ ಪರಿಹಾರ ಪ್ರಕರಣದ ಬಿಲ್ಲುಗಳನ್ನು ಪಾವತಿಸಲು ಕೃಷ್ಣಾಭಾಗ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕರು ನವನಗರದಲ್ಲಿರುವ ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ ವಿಭಾಗದ ಮುಖ್ಯಲೆಕ್ಕಾಧಿಕಾರಿಗಳಿಗೆ ರೂ.248.00 ಕೋಟಿ ಹಾಗೂ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಲೆಕ್ಕಾಧಿಕಾರಿಗಳಿಗೆ ರೂ.2.00 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದಾರೆ.

*ಅಭಿನಂದನೆ:*
———————-
ಭೂಸ್ವಾಧೀನ ಪರಿಹಾರದ ಅನುದಾನವನ್ನು ಬಿಡುಗಡೆ ಮಾಡುವ ಮೂಲಕ ಸರ್ಕಾರ ಸಂತ್ರಸ್ತರಿಗೆ ನ್ಯಾಯ ಒದಗಿಸಿದೆ ಎಂದು ಬಣ್ಣಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಅವರನ್ನು ಅಭಿನಂದಿಸಿದ್ದಾರೆ.

Nimma Suddi
";