This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Politics NewsState News

ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗೋದು ಶತಸಿದ್ಧ,: ಬಸವರಾಜ ಬೊಮ್ಮಾಯಿ

ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗೋದು ಶತಸಿದ್ಧ,: ಬಸವರಾಜ ಬೊಮ್ಮಾಯಿ

ಕಲಬುರಗಿ: ಜೂನ್ 4 ರ ನಂತರ ಕಾಂಗ್ರೆಸ್ ಪಕ್ಷದಲ್ಲಿ ಸಾಕಷ್ಟು ಬದಲಾವಣೆಯಾಗಲಿದೆ ಮತ್ತು ರಾಜ್ಯದ ಕಾಂಗ್ರೆಸ್ ಸರ್ಕಾರ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವಿನ ಆಂತರಿಕ ಗುದ್ದಾಟ ಮತ್ತು ಉಳಿದ ಸಚಿವರು ಹಾಗೂ ಶಾಸಕರಲ್ಲಿ ಮಡುಗಟ್ಟಿರುವ ಅಸಮಾಧಾನಗಳಿಂದಾಗಿ ಉರುಳಲಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿಂದು ಮಾಧ್ಯಮ ಗೋಷ್ಟಿ ನಡೆಸಿ ಮಾತಾಡಿದ ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ, ಚುನಾವಣಾ ಸಮಯದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನೀಡಿದ ಹೇಳಿಕೆಗಳನ್ನು ಗಮನಿಸಿದರೆ ವೈಯಕ್ತಿಕ ಪ್ರತಿಷ್ಠೆಯ ಪೈಪೊಟಿ ತೀವ್ರಗೊಂಡಿರುವುದು ಸ್ಪಷ್ಟವಾಗುತ್ತದೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಹಲವಾರು ಸಚಿವರು ತಾವು ಸ್ಪರ್ಧಿಸುವ ಬದಲು ತಮ್ಮ ಮಕ್ಕಳನ್ನು ಕಣಕ್ಕಿಳಿಸಿದ್ದಾರೆ. ಇದು ಅವರ ಹತಾಷೆಯ ಮತ್ತೊಂದು ಪ್ರತೀಕ ಯಾಕೆಂದರೆ ರಾಜ್ಯದಲ್ಲಿ ರಾಜಕೀಯ ವಾತಾವರಣ ತಮಗೆ ಪ್ರತಿಕೂಲವಾಗಿದೆ ಅಂತ ಅವರಿಗೆ ಗೊತ್ತಿದೆ ಎಂದು ಬೊಮ್ಮಾಯಿ ಹೇಳಿದರು.

ಸಾರ್ವತ್ರಿಕ ಚುನಾವಣೆ ಫಲಿತಾಂಶಗಳ ನಂತರ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗೋದು ಶತಸಿದ್ಧ, ಅದರ ಜೊತೆಗೆ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಎರಡು ಹೋಳಾದರೂ ಆಶ್ಚರ್ಯಪಡಬೇಕಿಲ್ಲ ಎಂದು ಬೊಮ್ಮಾಯಿ ಹೇಳಿದರು.

 

Nimma Suddi
";