This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Politics News

ಶಿಕ್ಷಣ ಇಲಾಖೆ ನೌಕರರ ಕುಂದು ಕೊರತೆ ಸಭೆ 

ನಿಮ್ಮ ಸುದ್ದಿ ಬಾಗಲಕೋಟೆ

ಸಾರ್ವಜನಿಕ ಶಿಕ್ಷಣ ಇಲಾಖೆಯ ನೌಕರರ ಕುಂದು ಕೊರತೆ ಹಾಗೂ ಸಮಸ್ಯೆ ಪರಿಹಾರ ಮತ್ತು ರಾಷ್ಟಿಯ ಶಿಕ್ಷಣ ನೀತಿಯ ಕುರಿತು ಜ.8ರಂದು ನಗರದ ವಿದ್ಯಾಗಿರಿಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜ್‌ನಲ್ಲಿ ಸಭೆ ಆಯೋಜಿಸಲಾಗಿದೆ.

ವಿಧಾನ ಪರಿಷತ್ ಸದಸ್ಯರು ಹಾಗೂ ರಾಷ್ಟಿಯ ಶಿಕ್ಷಣ ನೀತಿ ಸಮತಿ ಸದಸ್ಯರೂ ಆಗಿರುವ ಅರುಣ ಶಹಾಪೂರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರೌಢಶಾಲೆಯ ಮುಖ್ಯಗುರುಗಳಿಗೆ ಸಭೆ ಆಯೋಜಿಸಲಾಗಿದೆ.

ಬೆಳಗ್ಗೆ 10.30ಕ್ಕೆ ಬಾದಾಮಿ, ಬಾಗಲಕೋಟೆ, ಹುನಗುಂದ ತಾಲೂಕು ಹಾಗೂ ಮಧ್ಯಾಹ್ನ 2ಕ್ಕೆ ಬೀಳಗಿ, ಜಮಖಂಡಿ ಹಾಗೂ ಮುಧೋಳ ತಾಲೂಕಿನ ಸಂಬಂಧಿಸಿದ ನೌಕರರೊಂದಿಗೆ ಚರ್ಚೆ ನಡೆಯಲಿದೆ ಎಂದು ಡಿಡಿಪಿಐ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Nimma Suddi
";