This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Politics NewsState News

ಸಿದ್ದರಾಮಯ್ಯ ಅವರಿಗೆ ಮೋದಿಯವರ ವಿರುದ್ದ ಹೇಳಲು ಏನೂ ಇಲ್ಲ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ಅವರಿಗೆ ಮೋದಿಯವರ ವಿರುದ್ದ ಹೇಳಲು ಏನೂ ಇಲ್ಲ: ಬಸವರಾಜ ಬೊಮ್ಮಾಯಿ

ಹಾವೇರಿ: ಪ್ರಧಾನಿ ನರೇಂದ್ರ ಮೋದಿ ವಿರುದ್ದ ಸಿಎಂ ಸಿದ್ದರಾಮನವರಿಗೆ ಮಾತನಾಡಲು ಏನೂ ಇಲ್ಲದ ಕಾರಣ ಸಂವಿಧಾನ ಬದಲಾಯಿಸುತ್ತಾರೆ ಎಂದು ರಾಜಕೀಯವಾಗಿ ಭಯ ಹುಟ್ಟಿಸಲು ಆರೋಪ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸವಣೂರಿನಲ್ಲಿ ಚುನಾವಣಾ ಪ್ರಚಾರಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂವಿಧಾನ ಬದಲು ಮಾಡುವ ಬಿಜೆಪಿ ಪಕ್ಷಕ್ಕೆ ಮತ ಹಾಕ್ಲಬೇಡಿ ಎಂಬ ಸಿಎಂ ಸಿದ್ದರಾಮಯ್ಯ ಮಾತಿಗೆ ಪ್ರತಿಕ್ರೀಯೆ ನೀಡಿದ ಅವರು, ಸಿದ್ದರಾಮಯ್ಯ ಅವರಿಗೆ ಮೋದಿಯವರ ವಿರುದ್ದ ಹೇಳಲು ಏನೂ ಇಲ್ಲ. ಕಳೆದ ಬಾರಿ ಇದನ್ನೆ ಹೇಳಿದ್ದರು. ಸಂವಿಧಾನ ಬದಲು ಮಾಡಲು ಯಾರ ಕೈಯಲ್ಲೂ ಆಗುವುದಿಲ್ಲ ಎಲ್ಲದಕ್ಕೂ ಕಾನೂನು ಅಂತ ಇದೆ ಎಂದರು.

ಭಾರತ ಮಾತಾ ಕೀ ಜೈ ಎನ್ನುವುದು ಬಿಜೆಪಿಯ ಅಪ್ಪನ ಮನೆ ಆಸ್ತಿನಾ ಎಂಬ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಮಾತಿಗೆ ತಿರುಗೇಟು ನೀಡಿದ ಬೊಮ್ಮಾಯಿಯವರು, ಅವರ ಹೇಳಿಕೆ ಸರಿಯಾಗಿದೆ ತಪ್ಪೆನೂ ಇಲ್ಲ. ಭಾರತ ಮಾತೆ ಕೈ ಜೈ ಎಂದು ಕೂಗಲು ಭಾರತದ ಮಕ್ಕಳಿಗೆ ಅಧಿಕಾರ ಇದೆ.

ಕಾಂಗ್ರೆಸ್‌ನವರು ಕೂಗಲಿ ನಾವು ಸ್ವಾಗತ ಮಾಡುತ್ತೇವೆ. ಭಾರತ ಮಾತೆ ಇನ್ನೂ ಖುಷಿ ಆಗುತ್ತಾಳೆ ಎಂದರು. ಆದರೆ, ಭಾರತ ಮಾತಾ ಕಿ ಜೈ ಎಂದು ಹೇಳಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಅಪ್ಪಣೆ ಕೇಳಿರುವುದು ಅಲ್ಲಿರುವವರ ಮನಸ್ಥಿತಿ ಏನು ಅಂತಾ ಬಿಂಬಿಸುತ್ತದೆ ಎಂದು ಹೇಳಿದರು.

ಸಂವಿಧಾನ ಬದಲು ಮಾಡಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ಹೇಳಿದೆ. ಸಿದ್ದರಾಮಯ್ಯ ಸುಮ್ಮನೆ ರಾಜಕೀಯ ಭಯ ಹುಟ್ಟಿಸಲು ಈ ರೀತಿ ಹೇಳುತ್ತಿದ್ದಾರೆ. ಡಾ‌ ಬಿಆರ್ ಅಂಬೇಡ್ಕರ್ ಸಂವಿಧಾನ ರಚನೆ ಮಾಡುವ ಶಾಶ್ವತ ಕೆಲಸ ಮಾಡಿದ್ದಾರೆ ಎಂದರು.

Nimma Suddi
";