This is the title of the web page
This is the title of the web page

Live Stream

March 2025
S M T W T F S
 1
2345678
9101112131415
16171819202122
23242526272829
3031  

| Latest Version 9.4.1 |

Politics News

ಬಿಜೆಪಿ ವಿರುದ್ಧ ಸಿದ್ದಾರಮಯ್ಯ ವಾಗ್ದಾಳಿ Siddaramaiah lashed out at BJP

ನಿಮ್ಮಸುದ್ದಿ ಹುಬ್ಬಳ್ಳಿ

ಹೊಡಿ, ಬಡಿ, ಕಡಿ ಅನ್ನೋದು ಬಿಜೆಪಿ ಸಂಸ್ಕೃತಿ. ಮಹಾತ್ಮಾ ಗಾಂಧೀಜಿಯಂತರವರನ್ನೇ ಕೊಂದವರು ಇವರು ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಆರ್ ಎಸ್ ಎಸ್ ನವರು ಇಂತವರ ಬಾಯಿಯಿಂದ ಹೇಳಿಸಿದ್ದಾರೆ. ರಾಜ್ಯದಲ್ಲಿ ಚರ್ಚೆಯಾಗಬೇಕಿರುವುದು ಅಭಿವೃದ್ದಿ ವಿಚಾರ. ರೈತರ, ಬಡವರ, ದಲಿತರ, ಅಲ್ಪಸಂಖ್ಯಾತರ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕು ಎಂದರು.

ಚುನಾವಣಾ ಪ್ರಣಾಳಿಕೆಯಲ್ಲಿ ಬೇಕಿದ್ದರೆ ಬರೆದುಕೊಳ್ಳಲಿ. ಈ ಚುನಾವಣೆ ಟಿಪ್ಪು ವರ್ಸಸ್ ಸಾವರ್ಕರ್ ನಡುವೆ ಚುನಾವಣೆ ಎಂದು ಬರೆದುಕೊಳ್ಳಲಿ. ಅದನ್ನು ಜನ ತೀರ್ಮಾನ ಮಾಡಲಿ. ಜನ ಇಂತಹದಕ್ಕೆಲ್ಲ ಪ್ರೋತ್ಸಾಹ ಕೊಡೋಕೆ ಆಗುತ್ತಾ ? ಎಂದರು.

ಸಿದ್ಧರಾಮಯ್ಯನನ್ನ ಮುಗಿಸಲಿ ಎಂದರೆ ಏನರ್ಥ? ಎಲ್ಲರೂ ಇದನ್ನ ಖಂಡಿಸಬೇಕು. ಒಬ್ಬ ಸಚಿವನಾಗಿ ಈ ರೀತಿ ಹೇಳಿಕೆ ಕೊಡೋದು ಎಷ್ಟರ ಮಟ್ಟಿಗೆ ಸರಿ? ಎಂದ ಸಿದ್ದರಾಮಯ್ಯ, ಪ್ರಜೆಗಳಿಗೆ ರಕ್ಷಣೆ ಕೊಡೋದು ಸಚಿವರು ಹಾಗೂ ಸರ್ಕಾರದ ಜವಾಬ್ದಾರಿ. ಟಿಪ್ಪುವನ್ನ ಮುಗಿಸಿದ ಹಾಗೆ ಸಿದ್ದರಾಮಯ್ಯನನ್ನ ಮುಗಿಸಿ ಎಂದರೆ ಏನರ್ಥ? ಪೊಲೀಸರು ಅವರ ವಿರುದ್ದ ಸುಮೋಟೋ ಪ್ರಕರಣ ದಾಖಲಿಸಬೇಕು ಎಂದರು.

ಪ್ರಧಾನಿ, ಅಮೀತ್ ಶಾ ಹೇಳಲಿ ಇದು ಸರೀನಾ ಅಂತಾ. ಸಿದ್ಧರಾಮಯ್ಯನನ್ನ ರಕ್ಷಿಸಬೇಕಾದವರೇ ಮುಗಿಸಿ ಅಂತಾ ಕರೆ ಕೊಟ್ಟರೆ ಏನರ್ಥ ? ನಾನು ದೂರು ಕೊಡೋಕೆ ಹೋಗಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

Nimma Suddi
";