This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Politics News

ಎಸ್ಟಿ ಮೀಸಲಾತಿ:ಸಮಾವೇಶ ಕ್ಷಣಗಣನೆ

ಬನಶಂಕರಿದೇವಿ ದರ್ಶನ ಪಡೆದ ಈಶ್ವರಪ್ಪ

ನಿಮ್ಮ ಸುದ್ದಿ ಬಾಗಲಕೋಟೆ

ಕುರುಬ ಸಮಾಜಕ್ಕೆ ಎಸ್ ಟಿ ಮೀಸಲಿಗೆ ಒತ್ತಾಯಿಸಿ ಬಾಗಲಕೋಟೆಯಲ್ಲಿ ನಡೆಯಲಿರುವ ಸಮಾವೇಶದ ಹಿನ್ನೆಲೆಯಲ್ಲಿ ಆಗಮಿಸಿರುವ ಸಚಿವ ಕೆ.ಎಸ್.ಈಶ್ವರಪ್ಪ ಶನಿವಾರ ಬೆಳಗ್ಗೆ ಬನಶಂಕರಿಗೆ ಬೇಟಿ ನೀಡಿ ದೇವಿ ದರ್ಶನ ಪಡೆದರು.

ಬಾಗಲಕೋಟೆಯ ನವನಗರದ ಕಾಳಿದಾಸ ಕಾಲೇಜ್ ಮೈದಾನದಲ್ಲಿ ಆಯೋಜಿಸಿರುವ ಸಮಾವೇಶದಲ್ಲಿ ಈಶ್ವರಪ್ಪ ಭೇಟಿ ನೀಡಿದ್ದು ಮಹತ್ವ ಪಡೆದಿದೆ.

ಕುರುಬ ಸಮುದಾಯವನ್ನು ಎಸ್ ಟಿ ಗೆ ಸೇರ್ಪಡೆಗೊಳಿಸಬೇಕೆಂದು ಬಹಳ ವರ್ಷದಿಂದ ಬೇಡಿಕೆ ಹಾಗೇ ಇದೆ. ಅದು ಇತ್ತೀಚೆಗೆ ತೀವ್ರ ಸ್ವರೂಪದ ಹೋರಾಟ ಪಡೆದುಕೊಂಡಿದ್ದು ಬಾಗಲಕೋಟೆ ಯಲ್ಲಿ ನಡೆಯಲಿರುವ ಬೆಳಗಾವಿ ವಿಭಾಗ ಮಟ್ಟದ ಈ ಸಮಾವೇಶ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಎನ್ನಲಾಗಿದೆ.

ಅಂದಾಜು 1 ಲಕ್ಷ ಸಮುದಾಯ ಬಾಂಧವರು, ಸ್ವಾಮೀಜಿಗಳು, ಸಚಿವರು, ಜನಪ್ರತಿನಿಧಿಗಳು, ಮುಖಂಡರು ಭಾಗವಹಿಸುವ ಈ ಸಮಾವೇಶ ಕೋವಿಡ್ ಭೀತಿ ನಂತರ ಜಿಲ್ಲೆಯಲ್ಲಿ ನಡೆಯುವ ಬೃಹತ್ ಸಮಾವೇಶವಾಗಲಿದೆ ಎಂದು ಅಂದಾಜಿಸಲಾಗಿದೆ.

ಕೋವಿಡ್ ನಿಯಮದಂತೆ ಸಮಾವೇಶಕ್ಕೆ ಆಗಮಿಸುವವರಿಗೆ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯಗೊಳಿಸಲಾಗಿದೆ.

Nimma Suddi
";