This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

National NewsState News

ಕಾಂಗ್ರೆಸ್ ಪಕ್ಷದ ಅಂತಹ ದುರ್ಬಲ ಮನೋಭಾವವು ಈ ಹಿಂದೆ ಗಡಿಯಾಚೆಗಿನ ಭಯೋತ್ಪಾದನೆಯನ್ನು ಪ್ರೋತ್ಸಾಹಿಸಿತು ; ಮೋದಿ

ಕಾಂಗ್ರೆಸ್ ಪಕ್ಷದ ಅಂತಹ ದುರ್ಬಲ ಮನೋಭಾವವು ಈ ಹಿಂದೆ ಗಡಿಯಾಚೆಗಿನ ಭಯೋತ್ಪಾದನೆಯನ್ನು ಪ್ರೋತ್ಸಾಹಿಸಿತು ; ಮೋದಿ

ಭುವನೇಶ್ವರ್: ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಅವರ ‘ಪಾಕಿಸ್ತಾನವನ್ನು ಗೌರವಿಸಿ’ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ ಆರ್ಥಿಕ ಸಮಸ್ಯೆಗಳಿಂದಾಗಿ ಭಾರತದಿಂದ ದೂರವಿರುವ ನೆರೆರಾಷ್ಟ್ರ ಪಾಕಿಸ್ತಾನ ತನ್ನ ಪರಮಾಣು ಶಸ್ತ್ರಾಸ್ತ್ರಗಳನ್ನು ಮಾರಾಟ ಮಾಡಬೇಕಾದ ಪರಿಸ್ಥಿತಿಯಲ್ಲಿದೆ ಎಂದು ಶನಿವಾರ ವ್ಯಂಗ್ಯವಾಡಿದರು.

ಒಡಿಶಾದಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು ಪಾಕಿಸ್ತಾನ ಪರಮಾಣು ಬಾಂಬ್‌ಗಳನ್ನು ಹೊಂದಿದೆ ಎಂದು ಹೇಳುವ ಮೂಲಕ ಭಾರತದ ಜನರನ್ನು ಹೆದರಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಂತಹ ದುರ್ಬಲ ಮನೋಭಾವವು ಈ ಹಿಂದೆ ಗಡಿಯಾಚೆಗಿನ ಭಯೋತ್ಪಾದನೆಯನ್ನು ಪ್ರೋತ್ಸಾಹಿಸಿತು ಎಂದರು.

“ಕಾಂಗ್ರೆಸ್ ನಿರಂತರವಾಗಿ ತನ್ನದೇ ದೇಶವನ್ನು ಹೆದರಿಸಲು ಪ್ರಯತ್ನಿಸುತ್ತಿದೆ. ‘ಎಚ್ಚರಿಕೆ, ಪಾಕಿಸ್ತಾನದಲ್ಲಿ ಅಣುಬಾಂಬ್ ಇದೆ’ ಎಂದು ಅವರು ಹೇಳುತ್ತಾರೆ. ಈ ದುರ್ಬಲರು ಭಾರತದ ಆತ್ಮವನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದು, ಕಾಂಗ್ರೆಸ್ ಯಾವಾಗಲೂ ಅಂತಹ ಮನೋಭಾವವನ್ನು ಹೊಂದಿತ್ತು. ಪಾಕಿಸ್ತಾನ ತಮ್ಮ ಸ್ವಂತ ಬಾಂಬ್‌ಗಳನ್ನು ಸಹ ನಿಭಾಯಿಸಲು ಸಾಧ್ಯವಾಗದ ಸ್ಥಿತಿಯಲ್ಲಿದೆ ಎಂದರು.

ಅವರು ತಮ್ಮ ಬಾಂಬ್‌ಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದು, ಆದರೆ ಅವರ ಕಳಪೆ ಗುಣಮಟ್ಟದ ಕಾರಣದಿಂದ ಯಾರೂ ಖರೀದಿಸಲು ಬಯಸುವುದಿಲ್ಲ. ಕಾಂಗ್ರೆಸ್ ಪಕ್ಷದ ದುರ್ಬಲ ಧೋರಣೆಯಿಂದಾಗಿ ಜಮ್ಮು ಮತ್ತು ಕಾಶ್ಮೀರದ ಜನರು ಆರು ದಶಕಗಳಿಂದ ಭಯೋತ್ಪಾದನೆಯನ್ನು ಎದುರಿಸಬೇಕಾಯಿತು” ಎಂದು ವಿವರಿಸಿದರು.

";