This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಮುಂದಿನ ಬಜೆಟ್​ನಲ್ಲಿ ರಾಜ್ಯದ ಎಲ್ಲಾ ಪತ್ರಕರ್ತರಿಗೆ ಉಚಿತ ಬಸ್​ ಪಾಸ್​​​ ನೀಡಲು ನಿರ್ಧಾರ: ಸಿಎಂ ಸಿದ್ದು

ಮುಂದಿನ ಬಜೆಟ್​ನಲ್ಲಿ ರಾಜ್ಯದ ಎಲ್ಲಾ ಪತ್ರಕರ್ತರಿಗೆ ಉಚಿತ ಬಸ್​ ಪಾಸ್​​​ ನೀಡಲು ನಿರ್ಧಾರ: ಸಿಎಂ ಸಿದ್ದು

ದಾವಣಗೆರೆ: ಮುಂದಿನ ಬಜೆಟ್​ನಲ್ಲೇ ರಾಜ್ಯದ ಎಲ್ಲಾ ಪತ್ರಕರ್ತರಿಗೆ ಉಚಿತ ಬಸ್​ ಪಾಸ್​​ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ನಗರದ ಹದಡಿ ರಸ್ತೆಯಲ್ಲಿರುವ ಶಾಮನೂರು ಶಿವಶಂಕರಪ್ಪ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮದಿಂದ ಬಡವರಿಗೆ ಸಹಾಯ ಆಗುತ್ತದೆ ಎಂಬುದನ್ನ ಅರಿತು ಬರೆಯಿರಿ. ನಾನು ಹೇಳಿದೆ ಎಂದು ಬರೆಯಬೇಡಿ. ಗಂಡಾ-ಹೆಂಡತಿ ‌ಜಗಳ ಉಂಡ ಮಲಗುವ ತನಕ.‌ ಆರೋಪ ಪ್ರತ್ಯಾರೋಪ ಸಾಮಾನ್ಯ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಆಗಬಾರದು ಎಂದರು.

ಅದಕ್ಕೆ ನಾನು ಅಭಿವ್ಯಕ್ತಿ ಸ್ವಾತಂತ್ರ್ಯದ ಪರ. ಅಭಿವ್ಯಕ್ತಿ ಸ್ವಾತಂತ್ರ್ಯ ಇದ್ದಾಗ ಮಾತ್ರ ವೈಚಾರಿಕೆ ಬೆಳೆಯಲು ಸಾಧ್ಯ. ಡಿವಿ ಗುಂಡಪ್ಪ ಕಾರ್ಯನಿರತ ಪತ್ರಕರ್ತರ ಸಂಘ ಸ್ಥಾಪನೆ ಮಾಡಿದ್ದು, ಪತ್ರಿಕೋದ್ಯಮ ಓದದಿದ್ದವರು ಸಹ ಪತ್ರಕರ್ತರಾಗಿದ್ದಾರೆ. ಮಹಾತ್ಮ‌ ಗಾಂಧಿ, ಅಂಬೇಡ್ಕರ ಅವರು ಸಹ ಪತ್ರಕರ್ತರಾಗಿದ್ದರು. ಸ್ವಾತಂತ್ರ್ಯ ಪೂರ್ವ ಪತ್ರಿಕೆಗಳು ಅದ್ಭುತ ಕೆಲಸ ಮಾಡಿವೆ. ದೇಶಕ್ಕೆ ಸ್ವಾತಂತ್ರ್ಯ ಬಂತು. ಪತ್ರಕರ್ತರಾದವರು ಶೇ 90 ಕ್ಕಿಂತ ಹೆಚ್ಚು ಪ್ರಮಾಣಿಕವಾಗಿ ಇರಬೇಕು.

ದೇಶದಲ್ಲಿ ಎಲ್ಲ ವರ್ಗದ ಜನ ಇದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಮೀಸಲಾತಿ ಬಂದಿದೆ. ಎಲ್ಲ ವರ್ಗದ ಕಲ್ಯಾಣ ಆಗಬೇಕು. ಧ್ವನಿ ಇಲ್ಲದವರಿಗೆ ಧ್ವನಿ ಆಗಬೇಕಾಗಿದ್ದು ನಮ್ಮ ಪತ್ರಕರ್ತನ ಜವಾಬ್ದಾರಿ. ಮಾಧ್ಯಮಗಳು ಯಾವುದೇ ಕಾರಣಕ್ಕೂ ಮೌಢ್ಯಗಳನ್ನ ಬೆಂಬಲಿಸಬಾರದು ನಾನು ಹಿಂದಿನ ಅವಧಿಯಲ್ಲಿ ಸಿಎಂ ಆಗಿದ್ದಾಗ ಕಾರ್ ‌ಮೇಲೆ ಕಾಗೆ ಕುಳಿತ್ತಿತ್ತು ಎಂದು ವಿವರಿಸಿದರು.

";