This is the title of the web page
This is the title of the web page

Live Stream

February 2025
S M T W T F S
 1
2345678
9101112131415
16171819202122
232425262728  

| Latest Version 9.4.1 |

State News

ಅರ್ಚಕರ ವೇತನ ವಾಪಸ್​ ಕೇಳಿದ ಕಾಂಗ್ರೆಸ್ ಸರ್ಕಾರ: ಹಿರೇಮಗಳೂರು ಕಣ್ಣನ್​​ಗೆ ನೋಟಿಸ್

ಅರ್ಚಕರ ವೇತನ ವಾಪಸ್​ ಕೇಳಿದ ಕಾಂಗ್ರೆಸ್ ಸರ್ಕಾರ: ಹಿರೇಮಗಳೂರು ಕಣ್ಣನ್​​ಗೆ ನೋಟಿಸ್

ಚಿಕ್ಕಮಗಳೂರು: ದೇಶದಾದ್ಯಂತ ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಸಂಭ್ರಮ ಮನೆಮಾಡಿರುವ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಸರ್ಕಾರ ಅರ್ಚಕರಿಗೆ ನೀಡಿದ್ದ ವೇತನವನ್ನೇ ವಾಪಸ್ ಕೇಳಿದೆ ಎಂದು ಮಾಹಿತಿ ತಿಳಿದು ಬಂದಿದೆ.

4500 ರೂಪಾಯಿಯಂತೆ 10 ವರ್ಷದ 4,74,000 ರೂ. ಹಣವನ್ನು ವಾಪಸ್ ನೀಡುವಂತೆ ಕನ್ನಡದ ಪಂಡಿತ, ಅರ್ಚಕ ಹಿರೇಮಗಳೂರು ಕಣ್ಣನ್​​ ಅವರಿಗೆ ಜಿಲ್ಲಾಡಳಿತ ನೋಟಿಸ್​​ ನೀಡಿದ್ದು, ಕನ್ನಡದ ಪಂಡಿತ, ಕನ್ನಡ ಪೂಜಾರಿ ಎಂದೇ ಖ್ಯಾತಿ ಪಡೆದಿರುವ ಹಿರೇಮಗಳೂರು ಕಣ್ಣನ್ ಅವರು ಕಳೆದ 50 ವರ್ಷಗಳಿಂದ ಚಿಕ್ಕಮಗಳೂರು ಹೊರ ವಲಯದಲ್ಲಿರುವ ಕಲ್ಯಾಣ ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಕನ್ನಡದಲ್ಲೇ ರಾಮನ ಅರ್ಚನೆ ಮಾಡುವ ಚಿಕ್ಕಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ ಅವರ ವೇತನ ವಾಪಸ್ ಕೇಳುವ ಮೂಲಕ ಸಿದ್ದರಾಮಯ್ಯ ಸರ್ಕಾರ ಅವರಿಗೆ ಶಾಕ್ ನೀಡಿದೆ. ಅಷ್ಟೇ ಅಲ್ಲದೆ, ಅವರಿಗೆ ನೀಡಲಾಗುತ್ತಿರುವ ವೇತನವನ್ನೂ ತಡೆಹಿಡಿಯಲಾಗಿದೆ.

ಇವರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು 7500 ರೂ. ವೇತನ ನೀಡುತ್ತಿತ್ತು. ಆದರೆ ಇದೀಗ ದೇವಾಲಯದ ಆದಾಯ ಕಡಿಮೆ‌ ಇದೆ ಅಂತ ಕಾರಣ ನೀಡಿ ಈ ಹಿಂದೆ ನೀಡಿದ್ದ 7500 ರೂ. ವೇತನದಲ್ಲಿ 4500 ರೂ. ಅನ್ನು ವಾಪಸ್ ನೀಡುವಂತೆ, ಈ ತಿಂಗಳ ವೇತನವನ್ನು ತಡೆ ಹಿಡಿದು 2023ರ ಡಿಸೆಂಬರ್​ 2ರಂದು ತಹಶಿಲ್ದಾರ್ ಸುಮಂತ್ ನೋಟಿಸ್​ ನೀಡಿದ್ದಾರೆ ಎಂದು ಮಾಹಿತಿ ಬೆಳಕಿಗೆ ಬಂದಿದೆ.

Nimma Suddi
";