This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Local NewsNational NewsPolitics NewsState News

ಪಾರ್ಲಿಮೆಂಟ್ ಚುನಾವಣೆಗೂ ಮುನ್ನವೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವನತಿ:ಮುರುಗೇಶ ನಿರಾಣಿ

ಪಾರ್ಲಿಮೆಂಟ್ ಚುನಾವಣೆಗೂ ಮುನ್ನವೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವನತಿ:ಮುರುಗೇಶ ನಿರಾಣಿ

ಬಾಗಲಕೋಟೆ

ರಾಜ್ಯ ರಾಜಕಾರಣದಲ್ಲಿ ಬಾರೀ ಗದ್ದಲ ಎಬ್ಬಸಿರುವ ಜಾತಿ ಗಣತಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಮುರುಗೇಶ್​ ನಿರಾಣಿ ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಬಾಗಲಕೋಟೆಯಲ್ಲಿ ಈ ಕುರಿತು ಮಾತನಾಡಿದ ಅವರು, ಈಗಾಗಲೇ ಜಾತಿಗಣತಿ ವಿಚಾರವಾಗಿ ಕಾಂಗ್ರೆಸ್ ನ ಹಿರಿಯರು,ವೀರಶೈವ ಸಮಾಜದ ಪ್ರಮುಖರು ಶಾಮನೂರು ಶಿವಶಂಕ್ರಪ್ಪನವರೇ ಹೇಳಿದ್ದಾರೆ. ಅವರು ಅದೇ ಪಕ್ಷದಲ್ಲಿ ಇದ್ದುಕೊಂಡು ಇದು ಮಾಡೋದು ಸರಿಯಲ್ಲ ಅಂತ ಹೇಳಿದ್ದಾರೆ.

ರಾಜ್ಯದಲ್ಲಿ ಅಂದಾಜು 1.30 ಕೋಟಿ ಜನ ವೀರಶೈವ ಲಿಂಗಾಯತರಿದ್ದಾರೆ. ಆದರೆ, ಕಾಂಗ್ರೆಸ್​ನವರು ಬರೀ 60 ಲಕ್ಷ ಜನರಿರುವುದು ಎಂದು ತೋರಿಸಲು ಹೊರಟಿದ್ದಾರೆ. ಕರ್ನಾಟಕ ರಾಜ್ಯದ ಏಳು ಕೋಟಿ ಜನರಲ್ಲಿ ಅಂದಾಜು 26% ವೀರಶೈವ ಲಿಂಗಾಯತ ಸಮಾಜವಿದೆ. ಈಗ ಇರುವ ಜನಸಂಖ್ಯೆಗಿಂತ ಶೇ.50ರಷ್ಟು ಕಡಿಮೆ ಇರುವುದಾಗಿ ತೋರಿಸಲು ಮುಂದಾಗಿದ್ದಾರೆ.

ಹೀಗೆ ತಮಗೆ ಬೇಕಾದ ಸಮಾಜವನ್ನು ಡಬಲ್ ಆಗಿ ತೋರಿಸೋದು ಬೇಡದೆ ಇರುವ ಸಮಾಜವನ್ನು ಕಡಿಮೆ ತೋರಿಸುವ ಹುನ್ನಾರ ನಡೆದಿದೆ. ಕಾಂಗ್ರೆಸ್​ನವರು 2018ರಲ್ಲಿ ಡಿವೈಡ್ ಮಾಡಲು ಹೋಗಿ ಹೀನಾಯವಾಗಿ ಸೋತಿದ್ದಾರೆ. ಈಗ ನೋಡಿದರೆ ಜಾತಿಗಣತಿ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನವೇ ರಾಜ್ಯದಲ್ಲಿರುವ ಕಾಂಗ್ರೆಸ್​ ಸರ್ಕಾರ ಪತನವಾಗಲಿದೆ. ಸ್ವತಃ ಕಾಂಗ್ರೆಸ್​ ಪಕ್ಷದ ಶಾಸಕರೇ ತಮ್ಮದೇ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ಐದು ಗ್ಯಾರಂಟಿಗಳನ್ನು ಘೋಷಿಸಲಾಗಿದ್ದು, ಈವರೆಗೆ ಸರಿಯಾಗಿ ಜಾರಿಯಾಗಿಲ್ಲ. ಈ ಸರ್ಕಾರಕ್ಕೆ ಏಳು ಕೋಟಿ ಜನ ಸಾಫ ಹಾಕುತ್ತಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಜನತ ಇದಕ್ಕೆ ತಕ್ಕ ಉತ್ತರ ಕೊಡಲಿದ್ದು, ಬಿಜೆಪಿ 28 ಸ್ಥಾನಗಳಲ್ಲಿ ಗೆಲ್ಲುವುದು ಪಕ್ಕಾ ಎಂದು ಮಾಜಿ ಸಚಿವ ಮುರುಗೇಶ್​ ನಿರಾಣಿ ಭವಿಷ್ಯ ನುಡಿದಿದ್ದಾರೆ.

";