This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ಹೈಕೋರ್ಟ್‌: ನಾಡಗೀತೆ ವಿವಾದ, ಖಾಸಗಿ ಶಾಲೆಗಳಿಗೆ ಯಾವ ದಾಟಿ ಅನ್ವಯಿಸುತ್ತದೆಂಬ ಬಗ್ಗೆ ಸ್ಪಷ್ಟನೆ ನೀಡಲು ಸರ್ಕಾರಕ್ಕೆ ಸೂಚನೆ

ಹೈಕೋರ್ಟ್‌: ನಾಡಗೀತೆ ವಿವಾದ, ಖಾಸಗಿ ಶಾಲೆಗಳಿಗೆ ಯಾವ ದಾಟಿ ಅನ್ವಯಿಸುತ್ತದೆಂಬ ಬಗ್ಗೆ ಸ್ಪಷ್ಟನೆ ನೀಡಲು ಸರ್ಕಾರಕ್ಕೆ ಸೂಚನೆ

ಬೆಂಗಳೂರು: ಯಾವ ಧಾಟಿಯಲ್ಲಿ ನಾಡಗೀತೆ ಹಾಡಬೇಕು ಎಂಬ ಸಂಬಂಧ ಸರ್ಕಾರ ಹೊರಡಿಸಿರುವ ತಿದ್ದುಪಡಿ ಆದೇಶ ಖಾಸಗಿ ಶಾಲೆಗಳಿಗೆ ಅನ್ವಯವಾಗುತ್ತದೆಯೇ ಇಲ್ಲವೇ ಎಂಬ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಹೈಕೋರ್ಟ್‌ ಸೂಚನೆ ನೀಡಿರುವ ಮಾಹಿತಿ ಬೆಳಕಿಗೆ ಬಂದಿದೆ.

ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ದಾಟಿಯಲ್ಲಿ 2 ನಿಮಿಷ 30 ಸೆಕೆಂಡ್‌ಗಳಲ್ಲಿ ನಾಡಗೀತೆ ಹಾಡುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿರುವ ಅರ್ಜಿ ನ್ಯಾಯಮೂರ್ತಿ ಎಂ. ಕೃಷ್ಣ ಎಸ್‌. ದೀಕ್ಷಿತ್‌ ಅವರ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿದ್ದು,

ಸರ್ಕಾರಿ ವಕೀಲರು, ” ಎಲ್ಲ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರಿ ನಿಗಮ ಮಂಡಳಿ, ಪ್ರಾಧಿಕಾರ, ಅರೆ ಸರ್ಕಾರಿ ಇಲಾಖೆಗಳು ಸೇರಿ ಇತರ ಅಧಿಕೃತ ಏರ್ಪಡಿಸುವ ಕಾರ್ಯಕ್ರಮಗಳು ಆರಂಭಿಸುವ ಮುನ್ನ ಹಾಡಬೇಕು ಎಂದು ಆದೇಶ ಹೊರಡಿಸಲಾಗಿದೆ ” ಎಂದು ತಿಳಿಸಿದರು.

ಅರ್ಜಿದಾರರ ಪರ ವಾದಿಸಿದ ಹಿರಿಯ ನ್ಯಾಯವಾದಿ ಅಶೋಕ್‌ ಹಾರನಹಳ್ಳಿ, ” ಸರ್ಕಾರದ ಆದೇಶದಿಂದ ವ್ಯಕ್ತಿಯ ಅಭಿವ್ಯಕ್ತಿ ಹಾಗೂ ವಾಕ್‌ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟಾಗುತ್ತಿದ್ದು, ನಾಡಗೀತೆ ಹೇಳಬೇಕು ಎನ್ನುವುದು ಸರಿ. ಇದೇ ಧಾಟಿಯಲ್ಲಿ ಹಾಡಬೇಕೆಂದು ಹೇಳುವುದನ್ನು ಒಪ್ಪಲಾಗದು ಡಾ.ಸಿ.ಅಶ್ವಥ್‌ ಅವರ ರಾಗ ಸಂಯೋಜನೆ ಮುಂದುವರಿಸುವ ಬಗ್ಗೆ ಸ್ವತಃ ಮೈಸೂರು ಅನಂತಸ್ವಾಮಿಯವರು ಒಪ್ಪಿಕೊಂಡಿದ್ದರು ಎನ್ನುವುದನ್ನು ನ್ಯಾಯಾಲಯದ ಮುಂದೆ ಪ್ರಸ್ತುತಪಡಿಸಿದರು. ಜತೆಗೆ ನಾಡಗೀತೆಯನ್ನು ನಮ್ಮಿಚ್ಛೆಯ ಧಾಟಿಯಲ್ಲಿಹಾಡಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು ಎಂದು ಮಾಹಿತಿ ಕಂಡು ಬಂದಿದೆ.

Nimma Suddi
";