This is the title of the web page
This is the title of the web page

Live Stream

March 2025
S M T W T F S
 1
2345678
9101112131415
16171819202122
23242526272829
3031  

| Latest Version 9.4.1 |

State News

ಹಾಸನ: ತಾಳಿ ಕಟ್ಟುವ ವೇಳೆ ಪ್ರಿಯಕರನ ಪ್ರವೇಶದಿಂದ, ಮುರಿದು ಬಿದ್ದ ಮದುವೆ

ಹಾಸನ: ತಾಳಿ ಕಟ್ಟುವ ವೇಳೆ ಪ್ರಿಯಕರನ ಪ್ರವೇಶದಿಂದ, ಮುರಿದು ಬಿದ್ದ ಮದುವೆ

ಹಾಸನ: ತಾಳಿ ಕಟ್ಟುವ ವೇಳೆ ಪ್ರಿಯಕರನ ಪ್ರವೇಶದಿಂದ ಮದುವೆ ಮುರಿದು ಬಿದ್ದಿರುವಂತಹ ಘಟನೆ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದ್ದು, ಇಂದು ಬೇಲೂರಿನ ಒಕ್ಕಲಿಗ ಸಮುದಾಯ ಭವನದಲ್ಲಿ ಬೇಲೂರಿನ ಯುವತಿ ಹಾಗೂ ಶಿವಮೊಗ್ಗ ಮೂಲದ ಯುವಕನೊಂದಿಗೆ ಮದುವೆ ನಡೆಯಬೇಕಿತ್ತು. ಆದರೆ ತಾಳಿ ಕಟ್ಟುವ ವೇಳೆ ಕಲ್ಯಾಣಮಂಟಪಕ್ಕೆ ಬಂದ ನವೀನ್​​ ಎಂಬಾತನಿಂದ ಮದುವೆಗೆ ಅಡ್ಡಿ ಆರೋಪ ಮಾಡಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

ತಾಳಿ ಕಿತ್ತುಕೊಂಡು ತೇಜಸ್ವಿನಿ ನನ್ನನ್ನು ಪ್ರೀತಿಸುತ್ತಿದ್ದಾಳೆ. ನನ್ನ ಜೊತೆ ಮದುವೆ ಮಾಡಿ ಎಂದು ಪಟ್ಟುಹಿಡಿದಿದ್ದಾನೆ. ಹೀಗಾಗಿ ಕಲ್ಯಾಣಮಂಟಪದಲ್ಲಿ ಕೆಲಕಾಲ‌ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಮಧ್ಯಪ್ರವೇಶಿಸಿದ ಬೇಲೂರು ಪೊಲೀಸರು ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತೇಜಸ್ವಿನಿ ತನ್ನನ್ನ ಪ್ರೀತಿಸುತ್ತಿದ್ದಳು. ತನಗೆ ವಿಚಾರ ಮುಚ್ಚಿಟ್ಟು ಮದುವೆ ಮಾಡಿಕೊಳ್ಳಲಾಗುತ್ತಿದೆ ಎಂದು ಯುವಕ ಆರೋಪಿಸಿದ್ದಾನೆ. ಇತ್ತ ಪ್ರೀತಿ ವಿಚಾರ ತಿಳಿದ ಮದುಮಗ ಮದುವೆ ಬೇಡ ಎಂದು ಹೊರಟು ಹೋಗಿದ್ದಾನೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆತ ಕೇರಳದವನು. ಪ್ರೀತಿಸಿದ್ದು ಮೈಸೂರಿನ ಹುಡುಗಿಯನ್ನು. ಆದರೆ ಮದುವೆಯಾಗಲು ಹೊರಟಿದ್ದು ಮಂಗಳೂರಿನ ಹುಡುಗಿಯನ್ನು. ಇನ್ನೇನು ತಾಳಿ ಕಟ್ಟಬೇಕು ಅನ್ನೊವಷ್ಟರಲ್ಲಿ ಪ್ರೇಯಸಿಯ ಎಂಟ್ರಿಯಾಗಿತ್ತು. ನಂತರ ಆಗಿದ್ದು ಹೈಡ್ರಾಮ. ಅಕ್ಷಯ್ ಎಂಬ ಕೇರಳದ ಕೋಝಿಕ್ಕೋಡ್ ಮೂಲದ ಯುವಕ ಕಳೆದ ಒಂದೂವರೆ ವರ್ಷದ ಹಿಂದೆ ಶಾಧಿ ಡಾಟ್ ಕಾಮ್​ನಲ್ಲಿ ಮೈಸೂರಿನ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ.

ಪರಿಚಯ ಆದ ಒಂದೂವರೆ ವರ್ಷದ ನಂತರ ಅಂದ್ರೆ ಡಿಸೆಂಬರ್ 26 ರಂದು ಇದೇ ಯುವಕನ ಮೇಲೆ ಇದೇ ಯುವತಿ ಕೇರಳದ ಕೋಝಿಕ್ಕೋಡ್​ನಲ್ಲಿ ಒಂದು ದೂರು ದಾಖಲಿಸಿದ್ದಾಳೆ. ತನ್ನನ್ನು ಪರಿಚಯ ಮಾಡಿಕೊಂಡು ಮದುವೆಯಾಗುತ್ತೇನೆ ಅಂತಾ ನಂಬಿಸಿ ಅತ್ಯಚಾರ ಮಾಡಿದ್ದಾನೆ ಎಂದು ದೂರು ನೀಡಿದ್ದಾಳೆ. ಅದರ ಜೊತೆಗೆ ತನಗೆ ಚಿತ್ರಹಿಂಸೆ ನೀಡಿದ್ದಾನೆ. ಸಿಗರೇಟ್​​ನಲ್ಲಿ ಮೈಕೈಗೆ ಸುಟ್ಟಿದ್ದಾನೆ ಅಂತಾ ಆರೋಪಿಸಿದ್ದಾಳೆ.

ಈ ದೂರು ದಾಖಲಾಗಿದ್ದು, ಆರೋಪಿ ಅಕ್ಷಯ್ ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದ. ಆದರೆ ಅದನ್ನು ಕೋರ್ಟ್ ವಜಾ ಮಾಡಿತ್ತು. ಈ ನಡುವೆ ಮಂಗಳೂರಿನ ಯುವತಿಯ ಜೊತೆ ಈ ಯುವತಿಗೆ ಮದುವೆ ನಿಶ್ಚಯವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ಕೋಟೆಕಾರು ಬಳಿಯ ಬೀರಿ ಎಂಬಲ್ಲಿ ಒಂದು ಖಾಸಗಿ ಹಾಲ್ ನಲ್ಲಿ ವಿವಾಹ ನಡೆಯುತ್ತಿತ್ತು. ಅಲ್ಲಿಗೆ ಮಾಜಿ ಪ್ರೇಯಸಿ ಎಂಟ್ರಿ ಕೊಟ್ಟಿದ್ದಳು. ಉಳ್ಳಾಲ ಪೊಲೀಸರ ಜೊತೆ ಎಂಟ್ರಿ ಕೊಟ್ಟ ಈ ಯುವತಿ ಯುವಕನ್ನು ಹಿಡಿದು ಕೇರಳ ಪೊಲೀಸರಿಗೆ ಕೊಡಿ. ಅವನು ಅತ್ಯಚಾರ ಆರೋಪಿ ಅಂತಾ ಗಲಾಟೆ ಮಾಡಿದ್ದಳು.

Nimma Suddi
";