This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Politics NewsState News

ರಾಜ್ಯದ ಜನತೆ ಸಿದ್ದರಾಮಯ್ಯ ಸರಕಾರದ ಪೊಳ್ಳು ಭರವಸೆಗಳಿಗೆ ಮಾರು ಹೋಗುವುದಿಲ್ಲ: ಬಿವೈ ವಿಜಯೇಂದ್ರ

ರಾಜ್ಯದ ಜನತೆ ಸಿದ್ದರಾಮಯ್ಯ ಸರಕಾರದ ಪೊಳ್ಳು ಭರವಸೆಗಳಿಗೆ ಮಾರು ಹೋಗುವುದಿಲ್ಲ: ಬಿವೈ ವಿಜಯೇಂದ್ರ

ಬೆಂಗಳೂರು: ರಾಜ್ಯದ ಜನತೆ ಸಿದ್ದರಾಮಯ್ಯ ಸರಕಾರದ ಪೊಳ್ಳು ಭರವಸೆಗಳಿಗೆ ಮಾರು ಹೋಗುವುದಿಲ್ಲ, ಮುಖ್ಯಮಂತ್ರಿಯವರು ಜನರನ್ನು ಯಾಮಾರಿಸುವುದು ನಿಲ್ಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಕೇಂದ್ರದಲ್ಲಿ ಸರ್ಕಾರ ರಚಿಸುವ ಹಗಲುಗನಸನ್ನು ಕಾಂಗ್ರೆಸ್ ನಾಯಕರು ಕಾಣುತ್ತಿದ್ದಾರೆ, ಇಂಡಿಯ ಒಕ್ಕೂಟದಲ್ಲಿ ಪ್ರಧಾನ ಮಂತ್ರಿಯಾಗಲು ಲಾಯಕ್ಕಾಗಿರುವ ಒಬ್ಬ ನಾಯಕನಾದರೂ ಇದ್ದ್ದಾರೆಯೇ? ಎಂದು ಪ್ರಶ್ನಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಮಕ್ಕೆ ನಿಲ್ಲುವ ಒಬ್ಬ ನಾಯಕನಿಲ್ಲದ ಇಂಡಿಯ ಒಕ್ಕೂಟವು ಚುನಾವಣೆಯಲ್ಲಿ ಹೇಳಹೆಸರಿಲ್ಲದಂತಾಗಲಿದೆ ಎನ್ನುವುದನ್ನು ಮನಗಂಡು ಸಿದ್ದರಾಮಯ್ಯನವರು ಉಡಾಫೆಯ ಮಾತುಗಳನ್ನಾಡುವುದು ನಿಲ್ಲಿಸಬೇಕು ಎಂದು ವಿಜಯೇಂದ್ರ ಹೇಳಿದರು.

ನೂರಿನ್ನೂರು ಸ್ಥಾನಗಳನ್ನು ಗೆಲ್ಲುವ ಬಗ್ಗೆ ಕೊಚ್ಚಿಕೊಳ್ಳುತ್ತಿರುವ ಕಾಂಗ್ರೆಸ್ 40 ಕ್ಕಿಂತ ಹೆಚ್ಚು ಸೀಟಗಳನ್ನೂ ಗೆಲ್ಲಲಾಗದ ದಾರಣ ಸ್ಥಿತಿ ತಲುಪಲಿದೆ ಎಂದು ಸೂಚಿಸಿದರು.

Nimma Suddi
";