This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Crime News

ಉರಗ ತಜ್ಞನೇ ಉರಗಕ್ಕೆ ಬಲಿ

ನಿಮ್ಮ ಸುದ್ದಿ ಬಾಗಲಕೋಟೆ

ನಗರ ಸೇರಿದಂತೆ ವಿವಿಧ ಕಡೆ ಹಾವು ಹಿಡಿದು ಅರಣ್ಯಕ್ಕೆ ಬಿಡುತ್ತಿದ್ದ ಹಾಗೂ ಮನೆಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸಂಘ ಸಂಸ್ಥೆಗಳ‌ಕಚೇರಿಗಳಲ್ಲಿ ಹಾವು ಇದ್ದರೆ ಪೋನ್ ಕರೆ ಮಾಡಿದರೆ ಸಾಕು ತಕ್ಷಣ ಬಂದು ಹಾವು ಹಿಡಿದುಕೊಂಡು ಹೋಗುತ್ತಿದ್ದ ನಗರದ ಉರಗ ತಜ್ಞ ರೆಂದೆ ಖ್ಯಾತಿಯಾಗಿದ್ದ ಡ್ಯಾನಿಯಲ್ ನ್ಯೂಟನ್ ಇಂದು ಹಾವು ಕಡಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಡ್ಯಾನಿಯಲ್‌ ಕಳೆದ‌ ಹತ್ತಾರು ವರ್ಷಗಳಿಂದ‌ ಯಾವುದೇ ಫಲಾಪೇಕ್ಷೆ ಇಲ್ಲದೇ ಸಮಾಜಸೇವೆ ಎಂದು ಯಾರಾದರೂ ಕರೆ‌ ಮಾಡಿದರೆ ತಕ್ಷಣ ಸ್ಥಳಕ್ಕೆ ಹೋಗಿ ಹಾವು ಹಿಡಿಯುವ ಡ್ಯಾನಿಯಲ್ ಕೊನೆಗೆ ಹಾವು ಹಿಡಿಯಲು ಹೋಗಿ ಹಾವು ಕಚ್ಚಿಸಿಕೊಂಡು ಸಾವನ್ನಪ್ಪಿದರು.

ಇತ್ತೀಚಿಗೆ ಹಾವು ಕಚ್ಚಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಕೆ ಕಂಡಿದ್ದರು .ಇದಲ್ಲದೇ ಕಳೆದ ಎರಡು ತಿಂಗಳ ಹಿಂದೆ ಮದುವೆ ಕೂಡ ಆಗಿದ್ದರು.

ಈಗ ಅವರ ಸಾವಿನ ಸುದ್ದಿ ಕೇಳಿ ನಗರ ಹಾಗೂ ಸುತ್ತಮುತ್ತಲಿನ ಜನ ದುಃಖ ವ್ಯಕ್ತಪಡಿಸಿದ್ದಾರೆ. ಹಾವು ಕಡಿದ ಸುದ್ದಿ ಮನೆಯವರಿಗೆ ತಲುಪುತ್ತಿದ್ದಂತೆ‌ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಬಿವಿವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಡ್ಯಾನಿಯಲ್ ನ್ಯೂಟನ್ ದೇಹದಾನ ಮಾಡಿದ್ದಾರೆ.

";